* ಕರ್ನಾಟಕ ಕಲಾ ಮಹಾವಿದ್ಯಾಲಯದಲ್ಲಿ ನಡೆದ ಘಟನೆ* ಕ್ರಿಕೆಟ್ ಆಡುವಾಗ ಮುನ್ನಾ ಇರ್ಕಲ್ಗೆ ಹೃದಯಾಘಾತ * ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿಯೇ ಯುವಕ ಸಾವು
ಧಾರವಾಡ(ಏ.03): ವಿದ್ಯಾಕಾಶಿ ಧಾರವಾಡದಲ್ಲಿ(Dharwad) ಕ್ರಿಕೆಟ್ ಆಡುವ ವೇಳೆ ಹೃದಯಾಘಾತವಾಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಇಂದು(ಭಾನುವಾರ) ನಡೆದಿದೆ. ಮುನ್ನಾ ಇರ್ಕಲ್ ಎಂಬುವನೇ ಕ್ರಿಕೆಟ್ ಆಡುವ ವೇಳೆ ಹೃದಯಾಘಾತದಿಂದ(Heart Attack) ಸಾವನ್ನಪ್ಪಿದ್ದಾನೆ.
Add Asianetnews Kannada as a Preferred Source

ನಗರದ ಕರ್ನಾಟಕ ಕಲಾ ಮಹಾವಿದ್ಯಾಲಯದಲ್ಲಿ ಬೆಳಿಗ್ಗೆ ಕ್ರಿಕೆಟ್(Cricket) ಆಡುವಾಗ ಮುನ್ನಾ ಇರ್ಕಲ್ಗೆ ಹೃದಯಾಘಾತ ಇಹಲೋಕ ತ್ಯಜಿಸಿದ್ದಾನೆ. ಮೃತ ಮುನ್ನಾ ಇರ್ಕಲ್ ನಗರದ ಸಂಗೊಳ್ಳಿ ರಾಯಣ್ಣ ನಗರದ ನಿವಾಸಿಯಾಗಿದ್ದಾನೆ ಅಂತ ತಿಳಿದು ಬಂದಿದೆ.
ಬೆಂಗಳೂರು; ವರ್ಕ್ಔಟ್ ಮಾಡುತ್ತಲೇ ಕುಸಿದು ಬಿದ್ದು ಮಹಿಳೆ ಸಾವು? ಏನ್ ಕಾರಣ
ಮುನ್ನಾ ಇರ್ಕಲ್ ದಿಢೀರ್ ಸಾವಿನಿಂದ ಯುವಕರು ಕಣ್ಣೀರು ಹಾಕಿದ್ದಾರೆ. ಯುವಕನನ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪಿದ್ದಾನೆ(Death) ಅಂತ ತಿಳಿದು ಬಂದಿದೆ. ಉಪನಗರ ಪೋಲಿಸ್(Police) ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
