ಭೀಮನ ಅಮಾವಾಸ್ಯೆ ದಿನ ನಗರದ ಅಶೋಕ ವೃತ್ತದ ಬಳಿ ನಡೆದಿದ್ದ ಯುವತಿಯನ್ನು ಇನ್ನೋವಾ ಕಾರಿನಲ್ಲಿ ಅಪಹರಿಸಿದ್ದ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. 

ಶಿವಮೊಗ್ಗ (ಜು.18) ಭೀಮನ ಅಮಾವಾಸ್ಯೆ ದಿನ ನಗರದ ಅಶೋಕ ವೃತ್ತದ ಬಳಿ ನಡೆದಿದ್ದ ಯುವತಿಯನ್ನು ಇನ್ನೋವಾ ಕಾರಿನಲ್ಲಿ ಅಪಹರಿಸಿದ್ದ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. 

Add Asianetnews Kannada as a Preferred SourcegooglePreferred

ಜೋಡಿಯನ್ನು ಪತ್ತೆ ಮಾಡಿದ ಪೊಲೀಸರು ವಿಚಾರಣೆ ನಡೆಸಿದ ಬಳಿಕ ಅವರಿಬ್ಬರೂ ವಯಸ್ಕರಾಗಿದ್ದು ಪರಸ್ಪರ ಪ್ರೀತಿ ಮದುವೆಯಾಗಿದ್ದರು. ಮದುವೆಗೆ ಪಾಲಕರ ವಿರೋಧವಿದ್ದ ಕಾರಣ ಮದುವೆ ವಿಚಾರವನ್ನು ಮುಚ್ಚಿಟ್ಟಿದ್ದಾಗಿ ಪೊಲೀಸರ ಬಳಿ ತಿಳಿಸಿದ ಬಳಿಕಬಿಟ್ಟು ಕಳುಹಿಸಿದ್ದಾರೆ.

ಭೀಮನ ಅಮವಾಸ್ಯೆ: ಪಾದಪೂಜೆ ಮಾಡದೇ ತವರಿನಲ್ಲಿದ್ದ ಪತ್ನಿಯನ್ನು ಕಿಡ್ನಾಪ್‌ ಮಾಡಿದ ಪತಿರಾಯ

ಶಿವಮೊಗ್ಗದ ಹೊಸಮನೆ ಯುವತಿ ಮತ್ತು ಗಾಜನೂರಿನ ಯುವಕ ಪರಸ್ಪರ ಪ್ರೀತಿಸಿದ್ದರು. ಗಾಜನೂರಿನ ಯುವಕ ಸಿಸಿ ಕ್ಯಾಮರಾ ಅಳವಡಿಸುವ ಕೆಲಸ ಮಾಡಿಕೊಂಡಿದ್ದು ಹೊಸಮನೆಯಲ್ಲಿ ಅಂಗಡಿ ತೆರೆದಿದ್ದ. ಪಕ್ಕದಲ್ಲೇ ಯುವತಿಯ ಮನೆ ಇದ್ದುದರಿಂದ ಇಬ್ಬರ ನಡುವೆ ಪ್ರೀತಿ ಮೂಡಿತ್ತು. ಮನೆಯವರಿಗೆ ತಿಳಿಸದೇ ನಾಲ್ಕು ತಿಂಗಳ ಹಿಂದೆಯೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹ ನೋಂದಣಿ ಮಾಡಿಕೊಂಡಿದ್ದರು. 

ನಿನ್ನೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಯುವತಿ ತನ್ನ ತಾಯಿಯೊಂದಿಗೆ ಹೊರಟಿದ್ದಳು. ಬಸ್ ನಿಲ್ದಾಣದ ಬಳಿ ತೆರಳುತ್ತಿದ್ದಾಗ ಇನ್ನೋವಾ ಕಾರಿನಲ್ಲಿ ಬಂದ ಯುವಕ ಹಾಡಹಗಲೇ ಯುವತಿ(ಪತ್ನಿ)ಯನ್ನು ಕರೆದೊಯ್ದಿದ್ದ. ಯುವತಿಯ ತಾಯಿ ಗಾಬರಿಗೊಂಡು ದೊಡ್ಡಪೇಟೆ ಠಾಣೆಗೆ ಬಂದು ತನ್ನ ಪುತ್ರಿಯನ್ನು ಯಾರೋ ಕಾರಿನಲ್ಲಿ ಬಂದು ಅಪಹರಿಸಿದ್ದಾಗಿ ದೂರು ನೀಡಿದ್ದರು.

Bengaluru: ಪಾದಚಾರಿ ಮಹಿಳೆ ಮೇಲೆ ಹರಿದ ಬಿಬಿಎಂಪಿ ಕಸದ ಲಾರಿ

ಕಾರ್ಯಪ್ರವೃತ್ತರಾದ ಪೊಲೀಸರು ಅಶೋಕ ವೃತ್ತದ ಬಳಿ ಇದ್ದ ಸಿಸಿ ಕ್ಯಾಮರಾ ಪರಿಶೀಲಿಸಿ ಇನ್ನೋವಾ ಕಾರಿನ ಬೆನ್ನು ಬಿದ್ದಿದ್ದರು. ಪೊಲೀಸರು ಹಿಂಬಾಲಿಸಿದ್ದನ್ನು ಅರಿತ ಜೋಡಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಠಾಣೆಗೆ ತೆರಳಿ ಪೊಲೀಸರಿಗೆ ರಕ್ಷಣೆ ಮೊರೆ ಇಟ್ಟಿದ್ದರು. ಇಬ್ಬರು ಪರಸ್ಪರ ಮದುವೆಯಾದ ವಿಚಾರ ತಿಳಿಸಿದ ಬಳಿಕ ಬಳಿಕ ಜೋಡಿಯನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ.