ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ ಹಿನ್ನೆಲೆ| ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ| ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿರುವ ನದಿ ತೀರದ ತೋಟದ ವಸತಿ ಜನ| ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿಯ ರಕ್ಷಣೆ

ಚಿಕ್ಕೋಡಿ[ಆ.01]: ನದಿ ಪ್ರವಾಹದ ಸುಳಿಯಲ್ಲಿ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ಸ್ಥಳೀಯರ ಸಮಯಪ್ರಜ್ಞೆಯಿಂದ ರಕ್ಷಣೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

"

ಮಹಾರಾಷ್ಟ್ರದಲ್ಲಿ ಮಳೆ; ಕರ್ನಾಟಕದಲ್ಲಿ ಪ್ರವಾಹ!

2 ಲಕ್ಷ ಕ್ಯೂಸೆಕ್ ನೀರು ಕೃಷ್ಣಾ ನದಿಯ ಒಳ ಹರಿವು ಹೆಚ್ಚಾಗಿದ್ದು, ಕೃಷ್ಣಾ ನದಿ ಪಾತ್ರದ ಜನರಲ್ಲಿ ಆತಂಕ ಹೆಚ್ಚಿದೆ. ಹಲವು ಗ್ರಾಮಗಳಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಂಗಳಗಿ ಗ್ರಾಮದಲ್ಲಿ ಪ್ರವಾಹ ಹೆಚ್ಚಿದೆ.

ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ತಾಯಿ, ಮಗುವನ್ನು ಕಾಪಾಡಿದ 11ರ ಪೋರ!

ಯುವಕನೊಬ್ಬ ನೀರಿನಲ್ಲಿ ಸಿಲುಕಿ ಕೊಚ್ಚಿ ಹೋಗುತ್ತಿದ್ದಾಗ ತಕ್ಷಣವೇ ಸ್ಥಳೀಯರು ಯುವಕನನ್ನು ರಕ್ಷಣೆ ಮಾಡಿದ್ದಾರೆ. ನದಿ ತೀರದ ಜನರ ಕಷ್ಟಕ್ಕೆ ಈ ಭಾಗದ ಯಾವ ಅಧಿಕಾರಿಗಳು ಸ್ಪಂದಿಸದಿರುವುದು ದುರದೃಷ್ಟಕರ.