ಬೆಳಗಾವಿ ಜಿಲ್ಲಾಧ್ಯಕ್ಷೆ ವಿರುದ್ಧ ಪ್ರಕರಣ ದಾಖಲಾಗಿದ್ದು ಈ ನಿಟ್ಟಿನಲ್ಲಿ ಅವರು ರಾಜೀನಾಮೆ ನೀಡುವಂತೆ ಸದಸ್ಯರು ಆಗ್ರಹಿಸುತ್ತಿದ್ದಾರೆ.
ಬೆಳಗಾವಿ [ಜೂ.19] : ಜಿ.ಪಂ. ಅಧ್ಯಕ್ಷೆ ಆಶಾ ಐಹೊಳೆ ಅವರು ಬಂಧನದ ಭೀತಿಯಿಂದಲೇ ಮಂಗಳವಾರ ನಡೆದ ಜಿ.ಪಂ. ಸಾಮಾನ್ಯ ಸಭೆಗೆ ಗೈರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆಶಾ ಗೈರಾದ ಸಂಬಂಧ ಸಭೆಯಲ್ಲಿ ಚರ್ಚೆ ನಡೆದಿದ್ದು, ಕೆಲ ಸದಸ್ಯರು ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.
Add Asianetnews Kannada as a Preferred Source

ಅಥಣಿ ಪೊಲೀಸ್ ಠಾಣೆಯಲ್ಲಿ ಜಿಪಂ ಅಧ್ಯಕ್ಷೆ ಆಶಾ ಐಹೊಳೆ ಮತ್ತು ಅವರ ಪತಿ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದಕ್ಕೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಅಂದಿನಿಂದ ಆಶಾ ಯಾವ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿಲ್ಲ.
ಅದೇ ರೀತಿ ಮಂಗಳವಾರ ಜಿಪಂ ಸಭಾಭವನದಲ್ಲಿ ನಡೆದ ಜಿಪಂ ಸಾಮಾನ್ಯಸಭೆಗೂ ಅವರು ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
