ನೀರಲಗಿ ಏತ ನೀರಾವರಿ ಯೋಜನೆಯ ಮುಂದುವರಿದ ಕಾಮಗಾರಿಯಿಂದ ಈ ಭಾಗದ 1,500 ಎಕರೆ ಪ್ರದೇಶ ನೀರಾವರಿಯಾಗಲಿದೆ| ನೀರಲಗಿ ಏತ ನೀರಾವರಿ ಕಾಮಗಾರಿ ವಿಸ್ತರಣೆಯಾಗುತ್ತಿದೆ| 2 ಕೋಟಿ ವೆಚ್ಚದಲ್ಲಿ ಸುಮಾರು 1,500 ಎಕರೆ ನೀರಾವರಿಯಾಗಲಿದೆ| ಇದರಿಂದ ಅಂತರ್ಜಲ ಹೆಚ್ಚಳವಾಗಲಿದೆ| ಈ ಭಾಗದ ರೈತರಿಗೆ ಈ ಯೋಜನೆಯು ವರದಾನವಾಗಲಿದೆ|

ಕೊಪ್ಪಳ(ಅ.19): ನೀರಲಗಿ ಏತ ನೀರಾವರಿ ಯೋಜನೆಯ ಮುಂದುವರಿದ ಕಾಮಗಾರಿಯಿಂದ ಈ ಭಾಗದ 1,500 ಎಕರೆ ಪ್ರದೇಶ ನೀರಾವರಿಯಾಗಲಿದೆ. ಇದರಿಂದ ರೈತರಿಗೆ ಅನುಕೂಲವಾಗಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್‌ ಅವರು ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

ತಾಲೂಕಿನ ನೀರಲಗಿ ಗ್ರಾಮದ ಬಳಿ ಏತ ನೀರಾವರಿ ಯೋಜನೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ನೀರಲಗಿ ಏತ ನೀರಾವರಿ ಕಾಮಗಾರಿ ವಿಸ್ತರಣೆಯಾಗುತ್ತಿದೆ. ಹಿಂದೆ ಕಾಮಗಾರಿ ನಡೆದಿತ್ತು. ಆದರೆ 2 ಕೋಟಿ ವೆಚ್ಚದಲ್ಲಿ ಸುಮಾರು 1,500 ಎಕರೆ ನೀರಾವರಿಯಾಗಲಿದೆ. ಇದರಿಂದ ಅಂತರ್ಜಲ ಹೆಚ್ಚಳವಾಗಲಿದೆ. ಈ ಭಾಗದ ರೈತರಿಗೆ ಈ ಯೋಜನೆಯು ವರದಾನವಾಗಲಿದೆ. ಶೀಘ್ರದಲ್ಲಿಯೇ ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆಗೆ ಚಾಲನೆ ನೀಡಲಾಗುವುದು. ಈ ಯೋಜನೆಯಿಂದ ಸುಮಾರು 8ಸಾವಿರ ಎಕರೆ ನೀರಾವರಿಯಾಗಲಿದೆ ಎಂದರು.

ಈ ವೇಳೆ ಜಿಪಂ ಮಾಜಿ ಅಧ್ಯಕ್ಷ ಎಸ್‌.ಬಿ.ನಾಗರಳ್ಳಿ, ತಾಪಂ ಅಧ್ಯಕ್ಷ ಬಾಲಚಂದ್ರನ್‌, ಪ್ರಮುಖರಾದ ವೆಂಕನಗೌಡ ಹಿರೇಗೌಡ್ರ, ಜುಲ್ಲುಸಾಬ್‌ ಖಾದ್ರಿ,ರವಿ ಕುರಗೋಡ, ಕೃಷ್ಣ ಇಟ್ಟಂಗಿ, ಹನುಮರೆಡ್ಡಿ ಹಂಗನಕಟ್ಟಿ, ನಗರಸಭೆ ಸದಸ್ಯ ಅಕ್ಬರ್‌ಪಾಷಾ ಪಲ್ಟನ್‌, ಜಡಿಯಪ್ಪ ಬಂಗಾಳಿ, ಪ್ರಸನ್ನ ಗಡಾದ ಇತರರು ಇದ್ದರು.