ಮಳೆಗಾಲದಲ್ಲಿ ತುಂಗಭದ್ರಾ ನದಿಯಲ್ಲಿ ನೀರು ತುಂಬಿ ಅದರಲ್ಲಿ ಬರುವ ಹೊಸ ಮೀನುಗಳು, ಏಡಿಗಳನ್ನು ಹಿಡಿಯುತ್ತಾರೆ ಈ ಮಂದಿ. ಹೀಗೆ ಹಿಡಿದ ಮೀನು, ಏಡಿಗಳೇ ಇವರ ಪ್ರಮುಖ ಆಹಾರವೂ ಹೌದು. ಜೊತೆಗೆ ಇವನ್ನು ಮಾರಾಟ ಮಾಡಿ ಜೀವನ ನಿರ್ವಹಿಸುತ್ತಾರೆ.

ತುಂಗಭದ್ರಾ ನದಿಯ ದಡದುದ್ದಕ್ಕೂ ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮೀನು ಹಿಡಿಯುವ ಕಾಯಕದಲ್ಲೇ ಅನೇಕರು ತಮ್ಮ ಬದುಕಿನ ಬಂಡಿ ಓಡಿಸುತ್ತಾರೆ. ಮಳೆಗಾಲದಲ್ಲಿ ಬಹುತೇಕರಿಗೆ ಇದೇ ಜೀವನಕ್ಕೆ ಆಧಾರ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಳೆಗಾಲ ಶುರುವಾಯಿತು ಎಂದರೆ ತುಂಗಭದ್ರಾ ನದಿ ತಟ, ಕೊಪ್ಪಳ ಜಿಲ್ಲೆಯ ಹಿರೇಹಳ್ಳ, ಹುಲಿಕೆರೆ, ತಲ್ಲೂರು ಕೆರೆ, ಹುಲಿಗೆಮ್ಮ ದೇವಸ್ಥಾನ ಬಳಿಯ ನದಿಯಲ್ಲಿ ಇವರ ಕಾಯಕ ಜೋರಾಗಿರುತ್ತದೆ. ಮಳೆಗಾಲದಲ್ಲಿ ತುಂಗಭದ್ರಾ ನದಿಯಲ್ಲಿ ನೀರು ತುಂಬಿ ಅದರಲ್ಲಿ ಬರುವ ಹೊಸ ಮೀನುಗಳು, ಏಡಿಗಳನ್ನು ಹಿಡಿಯುತ್ತಾರೆ ಈ ಮಂದಿ. ಹೀಗೆ ಹಿಡಿದ ಮೀನು, ಏಡಿಗಳೇ ಇವರ ಪ್ರಮುಖ ಆಹಾರವೂ ಹೌದು. ಜೊತೆಗೆ ಇವನ್ನು ಮಾರಾಟ ಮಾಡಿ ಜೀವನ ನಿರ್ವಹಿಸುತ್ತಾರೆ.

ಎಲ್ಲೆಲ್ಲಿ ಮೀನು ದೊರೆಯುತ್ತದೆ?

ತುಂಗಾಭದ್ರಾ ಹಿನ್ನೀರಿನ ಸುತ್ತಮುತ್ತ ಸೇರಿದಂತೆ ಕೊಪ್ಪಳ ತಾಲೂಕಿನ ಹ್ಯಾಟಿ ಮುಂಡರಗಿ, ಕರ್ಕಿಹಳ್ಳಿ, ಲಾಚನಕೇರಿ, ಕುಣಿಕೇರಿ, ಬೇಟಗೇರಿ ಕಾಲುವೆ ಸೇರಿದಂತೆ ಜಿಲ್ಲೆಯ ಹೊಂದಿಕೊಂಡಿರುವ ತುಂಗಭದ್ರಾ ನದಿಯುದ್ದಕ್ಕೂ ಮೀನುಗಳನ್ನು ಹಿಡಿಯಲಾಗುತ್ತಿದೆ. ಈ ಗ್ರಾಮಗಳು ತುಂಗಭದ್ರಾ ನದಿಗೆ ಹೊಂದಿಕೊಂಡಿರುವುದರಿಂದ ಅದರ ಪಕ್ಕದಲ್ಲಿಯೇ ಮೀನುಗಾರರ ಕುಟುಂಬಗಳು ನೆಲೆಸಿ ಜೀವನ ನಡೆಸುತ್ತಿವೆ.

-ಸೋಮರೆಡ್ಡಿ ಅಳವಂಡಿ