10:07 AM (IST) Feb 13

Karnataka Liveಇದು ವಿಶ್ವದ ದುಬಾರಿ ಅಣಬೆ, ಕೆಜಿಗೆ ಬರೋಬ್ಬರಿ ₹ 15 ಲಕ್ಷ!

ಇದು, ಅಂತಿಂಥ ಅಣಬೆಯಲ್ಲ, ಜಗತ್ತಿನ ದುಬಾರಿ ಅಣಬೆಯಾಗಿದೆ. ಯರ್ಸಗುಂಬಾ (yarsagumba) ಎಂದು ಕರೆಯಲ್ಪಡುವ ಈ ಅಣಬೆ ಕೆಜಿಗೆ ಬರೋಬ್ಬರಿ ₹15 ಲಕ್ಷ! ಕೊಪ್ಪಳ ನಗರದ ತೋಟಗಾರಿಕಾ ಇಲಾಖೆಯ ಆವರಣದಲ್ಲಿ ಹಮ್ಮಿಕೊಂಡಿರುವ ಹಣ್ಣು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಇಡಲಾಗಿದ್ದು, ಜನರ ಗಮನ ಸೆಳೆಯುತ್ತಿದೆ.

Read Full Story
09:02 AM (IST) Feb 13

Karnataka LiveByrathi Basavaraj ಬಿಕ್ಲು ಶಿವ ಹತ್ಯೆ ಪ್ರಕರಣ - ರಾತ್ರೋರಾತ್ರಿ ಅರೆಸ್ಟ್ ಪ್ರೊಸೆಸ್ ಕಂಪ್ಲೀಟ್; ಇಂದು ಕೋರ್ಟ್‌ಗೆ ಹಾಜರು!

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಬೈರತಿ ಬಸವರಾಜ್ ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಯ ಪ್ರಮುಖ ಆರೋಪಿ ಜಗ್ಗನೊಂದಿಗೆ ನಿಕಟ ಸಂಪರ್ಕ, ಜಮೀನು ವೈಷಮ್ಯ, ಮತ್ತು ಫೋನ್ ಕರೆಗಳಂತಹ ಸಾಕ್ಷ್ಯಗಳ ಆಧಾರದ ಮೇಲೆ ಅವರ ವಿರುದ್ಧ ತನಿಖೆ ನಡೆಯುತ್ತಿದೆ.
Read Full Story
08:34 AM (IST) Feb 13

Karnataka LiveHampi Utsav 2026 - ಮೂರು ದಿನಗಳ ಹಂಪಿ ಉತ್ಸವಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ;

ವಿಶ್ವಪರಂಪರೆ ತಾಣ ಹಂಪಿಯು ಮೂರು ದಿನಗಳ ಉತ್ಸವಕ್ಕೆ ಸಜ್ಜಾಗಿದ್ದು, ವಿಜಯನಗರ ಸಾಮ್ರಾಜ್ಯದ ಭವ್ಯ ಪರಂಪರೆಯನ್ನು ಸ್ಮರಿಸಲಿದೆ. ಕಲೆ, ಸಾಹಿತ್ಯ, ಸಂಗೀತದ ಈ ಮಹಾಸಂಗಮದಲ್ಲಿ ಖ್ಯಾತ ತಾರೆಯರ ಮನರಂಜನೆ, ಧ್ವನಿ ಮತ್ತು ಬೆಳಕು ಪ್ರದರ್ಶನ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
Read Full Story
08:21 AM (IST) Feb 13

Karnataka LiveHebbal-Sarjapur metro line - ಬೆಂಗಳೂರು ಡಬಲ್ ಡೆಕ್ಕರ್ ಪ್ಲಾನ್‌ಗೆ ರೆಡ್ ಸಿಗ್ನಲ್!

ಹೆಬ್ಬಾಳ-ಸರ್ಜಾಪುರ ಸಂಪರ್ಕಿಸುವ ನಮ್ಮ ಮೆಟ್ರೋದ ಕೆಂಪು ಮಾರ್ಗದ ಡಬಲ್‌ ಡೆಕ್ಕರ್‌ ವಿನ್ಯಾಸಕ್ಕೆ ಕೇಂದ್ರ ಸರ್ಕಾರ ಎರಡನೇ ಬಾರಿಗೆ ಆಕ್ಷೇಪ ವ್ಯಕ್ತಪಡಿಸಿದೆ. ಈ ವಿನ್ಯಾಸವು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ದುರ್ಬಲಗೊಳಿಸಬಹುದು ಎಂದು ಕೇಂದ್ರ ಆತಂಕ ವ್ಯಕ್ತಪಡಿಸಿದೆ.

Read Full Story