ಲೋಕಾಯುಕ್ತ ನ್ಯಾಯಾಧೀಶ ಪಿ. ವಿಶ್ವನಾಥ್ ಶೆಟ್ಟಿಯವರ ಪೊಲೀಸ್ ಭದ್ರತಾ ಸಿಬ್ಬಂದಿ ಮಂಜು ತರೀಕೆರೆ ಸಿನಿಮಾಗೆಂದೇ ಕ್ರೈಂ ಥ್ರಿಲ್ಲರ್ ಕಥೆ ಬರೆದಿದ್ದಾರೆ. ಅದರ ಹೆಸರು ‘24 ಸೆಕೆಂಡ್ಸ್’. ಇಂಟರೆಸ್ಟಿಂಗ್ ಎಂದರೆ ಚಿತ್ರಕತೆ ಮಾದರಿಯಲ್ಲೇ ಅವರು ಪುಸ್ತಕ ಬರೆದಿದ್ದಾರೆ.
ಅಷ್ಟೇ ಅಲ್ಲದೆ, ಚಿತ್ರದ ಶೀರ್ಷಿಕೆಯನ್ನು ಕರ್ನಾಟಕ ಚಲನಚಿತ್ರ ಮಂಡಳಿಯಲ್ಲಿ ಈಗಾಗಲೇ ನೋಂದಾಯಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಈ ಕತೆ, ಚಿತ್ರಕತೆ ರಚಿಸಲು ಮಂಜು ಒಂದು ವರ್ಷ ತೆಗೆದುಕೊಂಡಿದ್ದಾರೆ. ಮಂಗಳಮುಖಿಯರ ಜೀವನದ ಕಥಾ ಹಂದರ ಹಾಗೂ ಹಳ್ಳಿಯೊಂದರಲ್ಲಿ ಶಾಮಿಯಾನ ಹೊಡೆಯುವ ಒಬ್ಬ ಅಮಾಯಕನ ದುರಂತ ಪ್ರೇಮ ಕಥೆಯನ್ನು ಈ ಕೃತಿ ಒಳಗೊಂಡಿದೆ. ‘ಒಬ್ಬ ಭಾರತೀಯ ಪ್ರಜೆಯಾಗಿ ತಮ್ಮ 24 ಗಂಟೆಗಳ ಸ್ವಾರ್ಥ ಜೀವನವನ್ನು ಮರೆತು, ಕನಿಷ್ಠ 24 ಸೆಕೆಂಡ್ಸ್ನಷ್ಟುಸಮಯವನ್ನಾದರೂ ಕಷ್ಟದಲ್ಲಿರುವವರಿಗೆ ಮೀಸಲಿಡಬೇಕು ಎಂಬ ಸಂದೇಶ ಇರುವ ಕತೆ ಇದು’ ಎನ್ನುತ್ತಾರೆ ಮಂಜು ತರೀಕೆರೆ.

ಉತ್ತಮ ಕಥೆ ಸಿಕ್ಕರೆ ಸಿನಿಮಾ ಮಾಡಲು ಇಚ್ಛಿಸುವ ನಿರ್ಮಾಪಕರು ಪೊಲೀಸ್ ಬರೆದ ಈ ಕತೆ- ಚಿತ್ರಕತೆ ಹಕ್ಕು ಪಡೆಯಲು ಸಂಪರ್ಕಿಸಬಹುದು. ದೂ: 9739670959, 9945046659
