Asianet Suvarna News Asianet Suvarna News

ಮಹದಾಯಿ ತೀರ್ಪು ಪ್ರಕಟ: ಕರ್ನಾಟಕಕ್ಕೆ 4 ಟಿಎಂಸಿ ಕುಡಿಯುವ ನೀರು

ನ್ಯಾಯಾಧಿಕರಣ ಮಹದಾಯಿ ತೀರ್ಪು ಪ್ರಕಟಿಸಿದ್ದು ರಾಜ್ಯ ಕೇಳಿದ್ದ 36.5 ಟಿಎಂಸಿ ನೀರಿನಲ್ಲಿ ಕೇವಲ 13.5 ಟಿಎಂಸಿ ಮಾತ್ರ ಹಂಚಲಾಗಿದೆ. ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್'ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ. 

Mahadayi water dispute verdict highlights: Karnataka to get 4 TMC
Author
Bengaluru, First Published Aug 14, 2018, 3:41 PM IST

ನವದೆಹಲಿ[ಆ.14]: ನ್ಯಾ. ಜೆ.ಎಂ ಪಾಂಚಾಳ್ ನೇತೃತ್ವದ ತ್ರಿಸದಸ್ಯ ಪೀಠ ಮಹದಾಯಿ ತೀರ್ಪನ್ನು ಪ್ರಕಟಿಸಿದ್ದು ರಾಜ್ಯಕ್ಕೆ  4 ಟಿಎಂಸಿ ಕುಡಿಯುವ ನೀರನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.

ಮಹದಾಯಿ ಕಣಿವೆಗೆ 1.5 ಟಿಎಂಸಿ ಒಳಗೊಂಡು ರಾಜ್ಯಕ್ಕೆ ಕುಡಿಯಲು 5.5 ಟಿಎಂಸಿ ನೀರು ಲಭ್ಯವಾಗಿದೆ. ಮಲಪ್ರಭೆ ಜಲಾಶಯಕ್ಕೆ 4 ಟಿಎಂಸಿ ಹರಿಸಲು ಒಪ್ಪಿಗೆ ನೀಡಲಾಗಿದೆ. ತ್ರಿಸದಸ್ಯ ಪೀಠ ಮಹದಾಯಿ ಜಲ ವಿದ್ಯುತ್ ಯೋಜನೆಗೆ 8.02 ಟಿಎಂಸಿ ನೀರು ಬಳಸಲು ಒಪ್ಪಿಗೆ ನೀಡಿದೆ. 

ಕಳೆದ 5 ವರ್ಷದಲ್ಲಿ 105 ದಿನಗಳ ಕಾಲ ವಿಚಾರಣೆ ನಡೆಸಿತ್ತು.  ಕರ್ನಾಟಕದ ಪರ ಅಶೋಕ್ ದೇಸಾಯಿ, ಮೋಹನ್ ಕಾತರಕಿ,ಇಂದಿರಾ ಜೈಸಿಂಗ್ ವಾದ ಮಂಡಿಸಿದ್ದು,ರಾಜ್ಯಕ್ಕೆ ಕುಡಿಯಲು 7 ಟಿಎಂಸಿ ನೀರನ್ನು ನ್ಯಾಯಾಧಿಕರಣ ಮುಂದೆ ಕೇಳಿದ್ದರು. ರಾಜ್ಯದ ಮನವಿಯಲ್ಲಿ 7 ಟಿಎಂಸಿ  ಹೆಚ್ಚುವರಿ ನೀರಿನ ಬೇಡಿಕೆಯಿತ್ತು. ರಾಜ್ಯಕ್ಕೆ ಒಟ್ಟು 13.5 ಟಿಎಂಸಿ ನೀರು ಹಂಚಿಕೆಯಾಗಿದೆ.

ತೀರ್ಪಿನ ಪ್ರಮುಖ ಅಂಶಗಳು

  • 4 TMC ನೀರು ಹರಿಸಲು ಸಮ್ಮತಿ..
  • ಕರ್ನಾಟಕದ ಪಾಲಿಗೆ ಮಹದಾಯಿ ನದಿಯಿಂದ 13.5 TMC ನೀರು
  • ಮಹದಾಯಿಯಿಂದ ಮಲಪ್ರಭೆಗೆ 4 TMC ನೀರು ಹರಿಸಲು ಒಪ್ಪಿಗೆ
  • ಕುಡಿಯುವ ನೀರಿನ ಬಳಕೆಗಾಗಿ 4 ಟಿಎಂಸಿ ಎಂದ ನ್ಯಾಯಾಧಿಕರಣ
  • ಮಹದಾಯಿ ನದಿಯಿಂದ ಕರ್ನಾಟಕಕ್ಕೆ 12 ಟಿಎಂಸಿ ನೀರು ಹಂಚಿಕೆ
  • ಬಂಡೂರ ಯೋಜನೆಗೆ ಒಟ್ಟು 2.18 ಟಿಎಂಸಿ ನೀರು ಹಂಚಿಕೆ
  • ಕಳಸಾ ಯೋಜನೆಗೆ ಒಟ್ಟು 1.72 ಟಿಎಂಸಿ ನೀರು ಹಂಚಿದ ಟ್ರಿಬ್ಯುನಲ್
  • ಜಲ ವಿದ್ಯುತ್ ಯೋಜನೆಗೆ ಒಟ್ಟು 8.02 ಟಿಎಂಸಿ ನೀರು-
  • ಕಳಸಾ ಯೋಜನೆಗೆ ಒಟ್ಟು 1.72 ಟಿಎಂಸಿ ನೀರು ಹಂಚಿದ ಟ್ರಿಬ್ಯುನಲ್
  • ಜಲ ವಿದ್ಯುತ್ ಯೋಜನೆಗೆ ಒಟ್ಟು 8.02 ಟಿಎಂಸಿ ನೀರು-
  • ಮಹದಾಯಿ ನದಿ ಕಣಿವೆಯಲ್ಲಿ ಬಳಸಲು 1.5 TMC ನೀರು ಹಂಚಿಕೆ

ಕ್ಲಿಕ್ಕಿಸಿ:  ನ್ಯಾಯಾಧಿಕರಣ ಆದೇಶದ ಪೂರ್ಣ ಪ್ರತಿ

 

Follow Us:
Download App:
  • android
  • ios