ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರನ್ನು ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಜಿಟಿ ದೇವೇಗೌಡ ಹೊಗಳಿದ್ದಾರೆ.
ಮೈಸೂರು [ಅ.14]: ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಮತ್ತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ಮುಖಂಡ ರನ್ನು ಹೊಗಳಿದ್ದಾರೆ.
Add Asianetnews Kannada as a Preferred Source

ನಗರದ ಕಲಾಮಂದಿರ ದಲ್ಲಿ ನಡೆದ ವಾಲ್ಮೀಕಿ ಜಯಂತಿಯಲ್ಲಿ ಪಾಲ್ಗೊಂಡಿದ್ದ ಅವರು, ಸಿಎಂ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುತ್ತಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಕ್ಷೇತ್ರದ ಅಭಿವೃದ್ಧಿಗೆ ಆತಂಕ ಪಡುವ ಅಗತ್ಯವಿಲ್ಲ. ಅಂತೆಯೇ ಸಮುದಾಯದ ನಾಯಕರಾದ ಶ್ರೀರಾಮು ಲು ನೇತೃತ್ವದಲ್ಲಿಯೇ ನಗರದಲ್ಲಿ ನಾಯಕ ಮತ್ತು ಪರಿವಾರದ ಜನಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭ ನಡೆಯಲಿದೆ ಎಂದರು.