ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಕರ್ನಾಟಕದ ಹಳ್ಳಿ ಹಳ್ಳಿಗಳಲ್ಲಿ ಗೆದ್ದವರ ಸಂಭ್ರಮ ಮನೆ ಮಾಡಿದೆ. ಆದರೆ ಇದರ ನಡುವೆ ಆಘಾತಕಾರಿ ಘಟನೆ ನಡೆದಿದೆ. ಮತ ಎಣಿಕೆ ಮಾಡುತ್ತಿದ್ದ ಚುನಾವಣಾ ಅಧಿಕಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 

ಮೈಸೂರು(ಡಿ.30): ಕರ್ನಾಟಕದಲ್ಲಿ ನಡೆದ ಎರಡು ಹಂತದ ಗ್ರಾಮ ಪಂಚಾಯಿತ್ ಚುನಾವಣೆಗಳ ಫಲಿಶಾಂಶ ಇಂದು(ಡಿ.30)ಕ್ಕೆ ಹೊರಬಿದ್ದಿದೆ. ಆದರೆ ಮೈಸೂರಿನ ಪಿರಿಯಾಪಟ್ಟಣದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪುಷ್ಪ ಕಾನ್ವೆಂಟ್ ಮತ ಎಣಿಕಾ ಕೇಂದ್ರದಲ್ಲಿ ಎತ ಎಣಿಕೆ ಮಾಡುತ್ತಿದ್ದ ಚುನಾವಣಾಧಿಕಾರಿ ಹೃಹಯಾಘಾತದಿಂದ ನಿಧನರಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಲೋಕಲ್ ಕದನ: ಅಕ್ಕನ ವಿರುದ್ಧ ಗೆದ್ದ ತಂಗಿ, ಪತ್ರಕರ್ತನಿಗೆ ಭರ್ಜರಿ ಗೆಲುವು!..

52 ವರ್ಷದ ಬೊರೇ ಗೌಡ ಎಣಿಕೆ ಕೇಂದ್ರದಲ್ಲಿ ಮತ ಎಣಿಕೆ ಕೇಂದ್ರದಲ್ಲಿ ಮತ ಎಣಿಕೆ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆ ಬೋರೇ ಗೌಡ ಮೃತರಾಗಿದ್ದಾರೆ. 

ಲೋಕೋಪಯೋಗಿ ಇಲಾಖೆ ಎಇಇ ಆಗಿದ್ದ ಬೋರೆಗೌಡ, ಎನ್.ಶೆಟ್ಟಹಳ್ಳಿ ಗ್ರಾ.ಪಂ ಚುನಾವಣಾ ಅಧಿಕಾರಿಯಾಗಿ ನೇಮಕವಾಗಿದ್ದರು. ಬೆಳಗ್ಗೆ ತಕ್ಕ ಸಮಯಕ್ಕೆ ಮತ ಎಣಿಕೆ ಆರಂಭಿಸಿದ್ದ ಬೋರೇ ಗೌಡ ಅತೀ ಉತ್ಸಾಹದಿಂದ ಕೆಲಸದಲ್ಲಿ ಮಗ್ನರಾಗಿದ್ದರು. ಆದರೆ ದಿಢೀರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದೀಗ ಬೋರೇ ಗೌಡ ಕುಟಂಬಸ್ಥರ ದುಃಖ ಮುಗಿಲು ಮುಟ್ಟಿದೆ.