* ಮದುವೆಯಾದ ಬೆನ್ನಲ್ಲೇ ಹೊಸ ವಿವಾದ* ತಿರುಮಲ ದೇಗುಲ ಆವರಣದಲ್ಲಿ ನಯನತಾರಾ ಚಪ್ಪಲಿ ಧರಿಸಿ ಓಡಾಟ* ನಿಯಮ ಉಲ್ಲಂಘಿಸಿದ್ದಕ್ಕೆ ನಟಿಗೆ ಟಿಟಿಡಿ ನೊಟೀಸ್‌

ತಿರುಮಲ(ಜೂ.12): ನವ ದಂಪತಿಯಾದ ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್‌ ಶಿವನ್‌ ಅವರು ವಿವಾಹ ಸಮಾರಂಭದ ನಂತರ ದೇವರ ಆಶೀರ್ವಾದ ಪಡೆಯಲು ತಿರುಪತಿಗೆ ತೆರಳಿ, ದೇಗುಲದ ನಿಯಮವೊಂದನ್ನು ಉಲ್ಲಂಘಿಸಿದ್ದು ಹೊಸ ವಿವಾದಕ್ಕೆ ಹುಟ್ಟುಹಾಕಿದೆ.

Add Asianetnews Kannada as a Preferred SourcegooglePreferred

ತಿರುಮಲ ತಿರುಪತಿ ದೇವಾಲಯದ ಆವರಣದ ‘ಮಾಡಾ ಬೀದಿ’ಯಲ್ಲಿ ಚಪ್ಪಲಿ ಧರಿಸುವುದು ನಿಷಿದ್ಧವಾದರೂ, ನಯನತಾರಾ ಚಪ್ಪಲಿ ಧರಿಸಿ ಓಡಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಈ ಹಿನ್ನೆಲೆಯಲ್ಲಿ ಟಿಟಿಡಿ ಬೋರ್ಡಿನ ಅಧಿಕಾರಿ, ‘ನಯನತಾರಾ ದೇವಾಲಯದ ಆವರಣದಲ್ಲಿ ಚಪ್ಪಲಿ ಧರಿಸಿ ಓಡಾಡಿದ್ದಾರೆ. ಅಲ್ಲದೇ ದೇವಾಲಯದ ಆವರಣದಲ್ಲಿಯೇ ಫೋಟೋಶೂಟ್‌ ನಡೆಸಿದ್ದಾರೆ. ಚಪ್ಪಲಿ ಧರಿಸುವುದು, ಫೋಟೊ ತೆಗೆಯುವುದು ಎರಡನ್ನೂ ದೇವಾಲಯದ ಆವರಣದಲ್ಲಿ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಯನತಾರಾ ಅವರು ಕ್ಷಮಾಪಣಾ ವಿಡಿಯೋ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ವಿಘ್ನೇಶ್‌ ಈಗಾಗಲೇ ಕ್ಷಮಾಪಣೆ ಕೋರಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ’ ಎಂದಿದ್ದಾರೆ.

‘ಆದರೂ, ನಿಯಮ ಉಲ್ಲಂಘಿಸಿದ ನಟಿಗೆ ಕಾನೂನಾತ್ಮಕವಾಗಿ ನೊಟೀಸ್‌ ಕೂಡಾ ಕಳುಹಿಸಲಾಗುವುದು’ ಎಂದು ತಿಳಿಸಿದ್ದಾರೆ.