ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾಗೆ ಲಘು ಹೃದಯಾಘಾತ!
ಅರ್ಜುನ್ ಜನ್ಯಾಗೆ ಹೃದಯಾಘಾತ| ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ| ರಾತ್ರಿ ಮನೆಯಲ್ಲಿದ್ದಾಗ ಹೃದಯಾಘಾತ
ಮೈಸೂರು[ಫೆ.27]: ಅರ್ಜುನ್ ಜನ್ಯಾಗೆ ಲಘು ಹೃದಯಾಘಾತ ಸಂಭವಿಸಿದೆ.ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
"
ಸಂಗೀತ ಲೋಕದ ಮಾಂತ್ರಿಕ ಅರ್ಜುನ್ ಜನ್ಯಾಗೆ ಬುಧವಾರ ರಾತ್ರಿ ಲಘು ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜನ್ಯಾ ಅನಾರೋಗ್ಯದ ಸುದ್ದಿ ಅಭಿಮಾನಿಗಳಲ್ಲಿ ಆತಂಕವುಂಟು ಮಾಡಿದೆ.
ನೂರು ಸಿನಿಮಾಗಳ ಸಂಗೀತ ಸರದಾರ ಅರ್ಜುನ್ ಜನ್ಯಾ !
ಜನ್ಯಾಗೆ ಆಂಜಿಯೋಪ್ಲ್ಯಾಸ್ಟಿ ಹಾಗೂ ಆಂಜಿಯೋಗ್ರಾಂ ಚಿಕಿತ್ಸೆ ನೀಡಲಾಗಿದ್ದು, ಅವರು ಈ ಎರಡೂ ಎರಡು ಚಿಕಿತ್ಸೆಗೆ ಸ್ಪಂದಿಸಿದ್ದಾರೆನ್ನಲಾಗಿದೆ.
ಸದ್ಯ ಅರ್ಜುನ್ ಜನ್ಯ ಆರೋಗ್ಯ ಸ್ಥಿರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಇನ್ನು 10 ಗಂಟೆಗೆ ಅಪೋಲೋ ಆಸ್ಪತ್ರೆಯ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ.
ಇದನ್ನೂ ನೋಡಿ | ಇಂದಿನ ಚಿನ್ನ-ಬೆಳ್ಳಿ ದರ, ಪೆಟ್ರೋಲ್-ಡೀಸೆಲ್ ಬೆಲೆ:
"