ಮಂಗಳೂರಿನ ವಿಮಾನ ನಿಲ್ದಾಣ ಬಳಿ ಸಿಕ್ಕ ಬಾಂಬ್ನ್ನು ಕೆಂಜಾರು ಮೈದಾನಕ್ಕೆ ಸಾಗಿಸಿ ನಿಷ್ಕ್ರೀಯಗೊಳಿಸುವ ಪ್ರಯತ್ನದ ಬೆನ್ನಲ್ಲೇ ಮತ್ತೆರಡು ಕಡೆ ಸಜೀವ ಬಾಂಬ್ ಪತ್ತೆಯಾಗಿದ್ದು, ಕರಾವಳಿ ಜನರನ್ನು ಬೆಚ್ಚಿ ಬೀಳಿಸಿದೆ. ಇತ್ತ ದುನಿಯಾ ವಿಜಿ ಹುಟ್ಟು ಹಬ್ಬಕ್ಕೆ ಕೇಕ್ ಕತ್ತರಿಸಿ ವಿವಾದಕ್ಕೆ ಸಿಲುಕಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಅಮಿತ್ ಶಾ ನಿರ್ಗಮಿಸಿದ್ದು, ನೂತನ ಅಧ್ಯಕ್ಷರ ಆಯ್ಕೆಯಾಗಿದೆ. ರಾಜಕೀಯಕ್ಕೆ ಬಿಎಸ್ವೈ ಗುಡ್ ಬೈ, ಕೊಲೆಯಲ್ಲಿ ಅಂತ್ಯವಾದ ಪ್ರೇಮ ಪ್ರಕರಣ ಸೇರಿದಂತೆ ಜನವರಿ 20ರ ಟಾಪ್ 10 ಸುದ್ದಿ ಇಲ್ಲಿವೆ.