ಪುಲ್ವಾಮಾ ದಾಳಿಯ ಹುತಾತ್ಮ ಯೋಧರ ಕುಟುಂಬಗಳಿಗೆ ಹರಿದು ಬಂತು ನೆರವಿನ ಮಹಾಪೂರ | ನೆರವಿನ ಹಸ್ತಚಾಚಿದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ |  

ಮುಂಬೈ (ಫೆ. 27): ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ಗಾಯಕಿ ಲತಾ ಮಂಗೇಶ್ಕರ್ ಹಣಕಾಸಿನ ಸಹಾಯ ಮಾಡಲು ಮುಂದಾಗಿದ್ದಾರೆ. 

Add Asianetnews Kannada as a Preferred SourcegooglePreferred

ಬಾಹುಬಲಿ ಎದುರು ಕೆಜಿಎಫ್ ಪರ ಬ್ಯಾಟಿಂಗ್ ಮಾಡಿದ ದರ್ಶನ್

ದೇಶಕ್ಕಾಗಿ ಮಡಿದ ನಮ್ಮ ಹೆಮ್ಮೆಯ ಯೋಧರ ಕುಟುಂಬಗಳಿಗೆ ನೆರವಾಗಲು 1 ಕೋಟಿ ರೂ ಹಣವನ್ನು ನೀಡಲಿದ್ದಾರೆ. ಏ. 24 ರಂದು ಲತಾ ಮಂಗೇಶ್ಕರ್ ತಂದೆ ದೀನಾನಾಥ್ ಮಂಗೇಶ್ಕರ್ ಪುಣ್ಯತಿಥಿಯಂದು 1 ಕೋಟಿ ರೂ ಮೊತ್ತವನ್ನು ನೀಡಲಿದ್ದಾರೆ. 

ಹೌ ಈಸ್ ದಿ ಜೋಷ್? ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಮಾತುಗಳನ್ನು ಕೇಳಿ

‘ದೇಶಕ್ಕಾಗಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ಚಿತ್ರರಂಗದ ಸಾಕಷ್ಟು ಮಂದಿ ಸಹಾಯ ಮಾಡುತ್ತಲೇ ಬಂದಿದ್ದಾರೆ. ನಾವು ಕೂಡಾ ನಮ್ಮ ಕಡೆಯಿಂದ ಸಹಾಯ ಮಾಡಲು ಮುಂದಾಗಿದ್ದೇವೆ’ ಎಂದು ಹೇಳಿದ್ದಾರೆ. ದೀನಾನಾಥ್ ಮಂಗೇಶ್ಕರ್ ಪ್ರತಿಷ್ಠಾನ ಕೂಡಾ ಸೈನಿಕರಿಗೆ 5 ಲಕ್ಷ ರೂ ಕೊಡಲು ವಾಗ್ದಾನ ಮಾಡಿದೆ. 

ಈ ಹಿಂದೆ ಲತಾ ಮಂಗೇಶ್ಕರ್, ನನ್ನ ಹುಟ್ಟುಹಬ್ಬದಂದು ಬೊಕ್ಕೆ, ಗಿಫ್ಟ್ ಕಳುಹಿಸುವ ಬದಲು ಅದೇ ಹಣವನ್ನು ಸೈನಿಕರ ನಿಧಿಗೆ ಹಾಕುವಂತೆ ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದರು. ಇದಕ್ಕೆ ಅಭಿಮಾನಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.