ಕೊಟ್ಟ ಹಣ ಕೇಳಿದ್ದಕ್ಕೆ ಉದ್ಯಮಿ ಹತ್ಯೆಗೆ ಸುಪಾರಿ ಕೊಟ್ಟ ಕನ್ನಡದ ನಟಿ..!
ಕೊಟ್ಟ ಸಾಲವನ್ನು ವಾಪಾಸು ಕೇಳಿದರೆ ಕೊಡುವುದು ಕೊಂಚ ತಡವಾಗುತ್ತದೆ. ಅಂತೆಲ್ಲ ಮನವಿ ಮಾಡಿಕೊಳ್ಬಹುದು. ಆದ್ರೆ, ಕನ್ನಡದ ನಟಿಯೊಬ್ಬಳು ಸಿನಿಮಾ ರೀತಿಯಲ್ಲಿ ಕೊಟ್ಟ ಹಣ ವಾಪಸ್ ಕೇಳಿದ್ದ ಉದ್ಯಮಿಯನ್ನು ಮುಗಿಸಲು ಸ್ಕೆಚ್ ಹಾಕಿದ್ದಾಳೆ. ಯಾರು ಆ ಖರ್ನಕ್ ನಟಿ..? ಮುಂದೆ ಓದಿ...
ಬೆಂಗಳೂರು (ನ.15): ದೃಶ್ಯ ಎಂಬ ಕನ್ನಡದ ಖತರ್ನಾಕ್ ಯುವನಟಿಯೊಬ್ಬಳು ಕೊಟ್ಟ ಸಾಲವನ್ನು ವಾಪಾಸು ಕೇಳಿದ ವ್ಯಕ್ತಿ ಹತ್ಯೆಗೆ ಸುಪಾರಿ ಕೊಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಅಯೋಗ್ಯ ಚಿತ್ರದ ಸಹನಟಿ ದೃಶ್ಯ ವಿರುದ್ಧ ಜೀವಹರಣ ಮಾಡಲು ಪ್ರಯತ್ನಿಸಿದ ಆರೋಪ ಕೇಳಿಬಂದಿದ್ದು, ಹಣ ಕೊಟ್ಟಿದ್ದನ್ನು ವಾಪಸ್ ಕೇಳಿದ್ದಕ್ಕೆ ಹುಡುಗರನ್ನು ಬಿಟ್ಟು ಹತ್ಯೆಗೆ ಮುಂದಾಗಿದ್ದಾರೆನ್ನಲಾಗಿದೆ.
'ಗುಪ್ತಾಂಗ ಎಲ್ಲ ಮುಟ್ಟಂಗಿಲ್ಲ' ನಾಗಿಣಿ ಗರಂ ಆಗಿದ್ದು ಯಾರ ಮೇಲೆ?
ಬಲಮುರಿ ಸಮೀಪ ರಾಜೇಶ್ ಮೇಲೆ ನಾಲ್ವರಿಂದ ಹಲ್ಲೆಯಾಗಿತ್ತು. ಈ ವೇಳೆ ರಾಜೇಶ್ ದೇಹವನ್ನು ರೇಜರ್ನಿಂದ ಕೊರೆದು ಹಾಕಲಾಗಿತ್ತು. ಈ ವೇಳೆ 'ದೃಶ್ಯ ಬಳಿ ಹಣ ಕೇಳ್ತೀಯಾ' ಎಂದು ಹಲ್ಲೆ ನಡೆಸುವವರು ಕೂಗಾಡಿರುವುದಾಗಿ ರಾಜೇಶ್ ದೂರಿನಲ್ಲಿ ತಿಳಿಸಿದ್ದಾರೆ. ಗಾಯಗೊಂಡ ರಾಜೇಶ್ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದರು.
ಉದ್ಯಮಿ ರಾಜೇಶ್ ಎಂಬಾತ ದೃಶ್ಯಳಿಗೆ ಹಣ ನೀಡಿದ್ದನಂತೆ. ಕೊಟ್ಟ ಹಣ ವಾಪಾಸು ಕೊಡುವಂತೆ ರಾಜೇಶ್ ಕೇಳಿದ್ದ. ಈ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಬಳಿಕ ಹಣ ಕೇಳಿದ ರಾಜೇಶ್ ಮುಗಿಸುವಂತೆ ದೃಶ್ಯ ತಮ್ಮ ಹುಡುಗರಿಗೆ ಸುಪಾರಿ ನೀಡಿದ್ದಾಳೆ ಎಂದು ಆರೋಪಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ನಟಿ ದೃಶ್ಯ ವಿರುದ್ಧ ನ.13 [ಮಂಗಳವಾರ] ಮೈಸೂರಿನ ಕೆಆರ್ಎಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ದೃಶ್ಯ ಮತ್ತು ಆಕೆಯ ತಂದೆ ನಾಪತ್ತೆಯಾಗಿದ್ದಾರೆ.