ಹಿರಿಯ ರಂಗಕರ್ಮಿ, ನಿರ್ದೇಶಕಿ ಮಾಲತಿ ಸಾಗರ ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

ಬೆಂಗಳೂರು (ಏ. 01): ಹಿರಿಯ ರಂಗಕರ್ಮಿ, ನಿರ್ದೇಶಕಿ ಮಾಲತಿ ಸಾಗರ ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

Add Asianetnews Kannada as a Preferred SourcegooglePreferred

ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಲತಿ ಅವರು ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ. ದೆಹಲಿ ನಾಟಕಶಾಲೆಯಲ್ಲಿ ರಂಗ ಅಧ್ಯಯನ ಮಾಡಿದ್ದರು. ಸಾಕಷ್ಟು ನಾಟಕಗಳನ್ನು ರಚಿಸಿ ನಿರ್ದೇಶನ ಮಾಡಿದ್ದಾರೆ. 

ರಂಗಕರ್ಮಿ ಮಾಲತಿ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.