ಇತ್ತೀಚೆಗೆ ಸಿದ್ದರಾಮಯ್ಯ ಅವರು ಕೊಪ್ಪಳಕ್ಕೆ ಆಗಮಿಸಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದರು. ಆ ಕಾರ್ಯಕ್ರಮಕ್ಕೆ ಬಂದವರಿಗಾಗಿ ಭೋಜನ ವ್ಯವಸ್ಥೆ ಮಾಡಲಾಗಿತ್ತು.

ಕೊಪ್ಪಳ(ಸೆ.29): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಉಳಿದಿದ್ದ ಹಳಸಿದ ಅನ್ನ ಸೇವಿಸಿ ನೂರು ಕುರಿಗಳು ಮೃತಪಟ್ಟಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇತ್ತೀಚೆಗೆ ಸಿದ್ದರಾಮಯ್ಯ ಅವರು ಕೊಪ್ಪಳಕ್ಕೆ ಆಗಮಿಸಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದರು. ಆ ಕಾರ್ಯಕ್ರಮಕ್ಕೆ ಬಂದವರಿಗಾಗಿ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಉಳಿದ ಆಹಾರವನ್ನು ಬಯಲಲ್ಲಿ ಎಸೆಯಲಾಗಿತ್ತು. ಈ ಆಹಾರವನ್ನು ಸೇವಿಸಿ ಬೆಳಗಾವಿ ಜಿಲ್ಲೆ ಶಿರಗಾಂವ್‌ನ ಸೋಣ್ಣ ಪೂಜಾರ ಅವರ ೫೦, ಅಣಪ್ಪ ಪೂಜಾರ್ ಅವರ 30 ಹಾಗೂ ಫಕೀರಪ್ಪ ಅವರ 20 ಕುರಿಗಳು ಮೃತಪಟ್ಟಿವೆ.

ಇನ್ನೂ ಹಲವು ಕುರಿಗಳು ಅಸ್ವಸ್ಥಗೊಂಡಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೊಪ್ಪಳ ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಶಿವಣ್ಣ ಅವರು, ವಿಷಪೂರಿತ ಆಹಾರ ಸೇವಿಸಿಯೇ ಕುರಿಗಳು ಮೃತಪಟ್ಟಿವೆ ಎಂದಿದ್ದಾರೆ.