ಸುಪ್ರೀಂಕೋರ್ಟ್ ಕಾವೇರಿ ತೀರ್ಪು ಹಿನ್ನೆಲೆ : ಬೆಂಗಳೂರು ಹಾಗೂ ಮಂಡ್ಯದಲ್ಲಿ ನಿಷೇಧಾಜ್ಞೆ
ಬೆಂಗಳೂರು/ಮಂಡ್ಯ(ಸೆ.26): ಸುಪ್ರೀಂಕೋರ್ಟ್ನಲ್ಲಿ ಕಾವೇರಿ ತೀರ್ಪು ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆ ಹಾಗೂ ಮಂಡ್ಯ ಜಿಲ್ಲೆಯ ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ, ಮಳವಳ್ಳಿ, ಪಾಂಡವಪುರ ತಾಲೂಕಿನಲ್ಲಿ ನಿನ್ನೆ ಮಧ್ಯಾಹ್ನದಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ 6 ರಿಂದಲೇ ಮದ್ಯ ಮಾರಾಟವೂ ನಿಷೇಧಿಸಲಾಗಿದೆ. ಬಂದೂಬಸ್ತ್'ಗಾಗಿ 14 ಅರೆಸೇನಾ ತುಕಡಿ, 40 KSRP, ಸಿಎಆರ್ ತುಕಡಿ ನಿಯೋಜಿಸಲಾಗಿದೆ.