ಸಂಯುಕ್ತ ಆರಬ್‌ ಸಂಸ್ಥಾನದಲ್ಲಿ (ಯುಎಇ) ಭಾರತದ 15 ಮಂದಿಯನ್ನು ನೇಣಿನ ಕುಣಿಕೆಯಿಂದ ಪಾರು ಮಾಡಲಾಗಿದೆ. ಸಮಾಜಸೇವಕರೂ ಆದ ದುಬೈ ಮೂಲದ ಹೋಟೆಲ್‌ ಉದ್ಯಮಿಯೊಬ್ಬರು ಇವರನ್ನು ನೇಣಿನಿಂದ ಪಾರು ಮಾಡಿದ್ದಾರೆ.

ಜಲಂಧರ್‌: ಸಂಯುಕ್ತ ಆರಬ್‌ ಸಂಸ್ಥಾನದಲ್ಲಿ (ಯುಎಇ) ಭಾರತದ 15 ಮಂದಿಯನ್ನು ನೇಣಿನ ಕುಣಿಕೆಯಿಂದ ಪಾರು ಮಾಡಲಾಗಿದೆ. ಸಮಾಜಸೇವಕರೂ ಆದ ದುಬೈ ಮೂಲದ ಹೋಟೆಲ್‌ ಉದ್ಯಮಿಯೊಬ್ಬರು ಇವರನ್ನು ನೇಣಿನಿಂದ ಪಾರು ಮಾಡಿದ್ದಾರೆ.

Add Asianetnews Kannada as a Preferred SourcegooglePreferred

ಇವರಲ್ಲಿ 14 ಜನ ಪಂಜಾಬಿಗಳು ಹಾಗೂ ಓರ್ವ ಬಿಹಾರಿ ಇದ್ದಾರೆ. ಎಸ್‌.ಪಿ. ಸಿಂಗ್‌ ಒಬೆರಾಯ್‌ ಎಂಬ ದುಬೈ ಉದ್ಯಮಿಯು ಇವರ ರಕ್ಷಣೆಗೆ ಕಾರಣೀಕರ್ತರಾಗಿದ್ದಾರೆ. ಈ 15 ಮಂದಿ ಕಳ್ಳಬಟ್ಟಿತಯಾರಿಕೆಯ ಗ್ಯಾಂಗ್‌ನ ಜಾಲದಲ್ಲಿ ಸಿಲುಕಿದ್ದರು. ಇದು ಗುಂಪು ಘರ್ಷಣೆಗೆ ಕಾರಣವಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ಈ ಪ್ರಕರಣದಲ್ಲಿ ಇವರಿಗೆ 2011ರಲ್ಲೇ ಗಲ್ಲು ಶಿಕ್ಷೆಯಾಗಿತ್ತು.

ಆದರೆ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬವನ್ನು ಸಂಪರ್ಕಿಸಿದ ಸಮಾಜಸೇವಕ ಒಬೆರಾಯ್‌ ಅವರು, ಈ ಭಾರತೀಯರ ರಕ್ಷಣೆಗಾಗಿ ಮುಂದಾದರು. ಸಾವನ್ನಪ್ಪಿದವನ ಕುಟುಂಬಕ್ಕೆ ಜೀವಧನ (ಇದಕ್ಕೆ ಯುಎಇನಲ್ಲಿ ಬ್ಲಡ್‌ ಮನಿ ಎನ್ನುತ್ತಾರೆ- ಒಂದರ್ಥದಲ್ಲಿ ಪರಿಹಾರ) ನೀಡುವುದಾಗಿ ಮನವೊಲಿಸಿದರು. 

ಈ ರೀತಿ ಪರಿಹಾರದ ಹಣ ಸ್ವೀಕರಿಸಿ ಅಪರಾಧಿಗಳಿಗೆ ಕ್ಷಮೆ ನೀಡಲು ಕುಟುಂಬಕ್ಕೆ ಅವಕಾಶವಿದೆ. ಅದರಂತೆ ಸಂತ್ರಸ್ತನ ಕುಟುಂಬವು ಪರಿಹಾರ ಸ್ವೀಕರಿಸಿ ಅಪರಾಧಿಗಳಿಗೆ ಕ್ಷಮಾದಾನ ನೀಡಿದೆ. ಒಬೆರಾಯ್‌ ಅವರು ಇಂತಹ ಅನೇಕ ಮಾನವೀಯ ಕಾರ್ಯ ಮಾಡಿದ್ದು, 93 ಭಾರತೀಯರನ್ನು ಈವರೆಗೆ ರಕ್ಷಿಸಿದ್ದಾರೆ.