Asianet Suvarna News Asianet Suvarna News

ನಕ್ಸಲರ ಅಟ್ಟಹಾಸಕ್ಕೆ 15 ಯೋಧರು ಹುತಾತ್ಮ

ಪುಲ್ವಾಮ ದಾಳಿ ಘೋರ ದುರಂತ ಮಾಸುವ ಮುನ್ನವೇ ಇದೀಗ ಮತ್ತೊಂದು ದುರಂತವಾಗಿದೆ. ಕೆಂಪು ಉಗ್ರರ ಅಟ್ಟಹಾಸಕ್ಕೆ 15 ಯೋಧರು ಹುತಾತ್ಮರಾಗಿದ್ದಾರೆ. 

15 soldiers Martyred Due To naxals Attack in Maharashtra
Author
Bengaluru, First Published May 1, 2019, 2:25 PM IST

ಮುಂಬೈ : ಮಹಾರಾಷ್ಟ್ರದಲ್ಲಿ ಕೆಂಪು ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಪೊಲೀಸ್ ಹಾಗೂ ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ 15 ಯೋಧರು ಹುತಾತ್ಮರಾಗಿದ್ದಾರೆ.

"

ಮಹಾರಾಷ್ಟ್ರ ಗಡ್‌ಚಿರೋಲಿ ಪ್ರದೇಶದಲ್ಲಿ ನಕ್ಸಲರು ಐಇಡಿ ಸ್ಫೋಟಿಸಿದ್ದರಿಂದ ಈ ದುರಂತ ಸಂಭವಿಸಿದೆ. ಭದ್ರತಾ ಸಿಬ್ಬಂದಿ ಮತ್ತು ಪೊಲೀಸ್ ವಾಹನ ಗುರಿಯಾಗಿಸಿಕೊಂಡು ಕಳೆದ 24 ಗಂಟೆಯಲ್ಲಿ 2ನೇ ಬಾರಿಗೆ ಐಇಡಿ ಸ್ಫೋಟಿಸಲಾಗಿದೆ.

ಸ್ಫೋಟದ ತೀವ್ರತೆಗೆ ವಾಹನಗಳು ಹೊತ್ತಿ ಉರಿದಿವೆ. ಮಹಾರಾಷ್ಟ್ರ ದಿನ ಹಾಗೂ ಕಾರ್ಮಿಕ ದಿನ ನಡೆಯುತ್ತಿರುವ ಈ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಫೆಬ್ರವರಿ 14ರಂದು ಪುಲ್ವಾಮದಲ್ಲಿ ಉಗ್ರರ ದಾಳಿಗೆ 40 ಯೋಧರು ಹುತಾತ್ಮರಾದ ನೋವು ಮಾಸುವ ಮುನ್ನವೇ ಈ ಘಟನೆ ನಡೆದಿದೆ.

Follow Us:
Download App:
  • android
  • ios