ರಾಮ್'ಬನ್ ಜಿಲ್ಲೆಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ನಾಚ್'ಲಾನ ಪ್ರದೇಶದ ಕಣಿವೆಗೆ ಉರುಳಿದೆ. ಸ್ಥಳದಲ್ಲೇ 16 ಮಂದಿ ಮೃತಪಟ್ಟು, 19 ಗಂಭಿರ ಹಾಗೂ 8 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ

ಜಮ್ಮು(ಜು.16): ಜಮ್ಮು ಮತ್ತು ಶ್ರೀನಗರದ ರಾಮ್'ಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾತ್ರಾರ್ಥಿ'ಗಳು ಪ್ರಯಾಣಿಸುತ್ತಿದ್ದ ಬಸ್ ಕಂದಕಕ್ಕೆ ಬಿದ್ದ ಪರಿಣಾಮ 16 ಮಂದಿ ಮೃತಪಟ್ಟು 30 ಮಂದಿ ಗಾಯಗೊಂಡಿದ್ದಾರೆ.

Add Asianetnews Kannada as a Preferred SourcegooglePreferred

ಇಂದು ಬೆಳಿಗ್ಗೆ ಯಾತ್ರಾರ್ಥಿಗಳಿಧ್ದ ಬಸ್ ರಾಮ್'ಬನ್ ಜಿಲ್ಲೆಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ನಾಚ್'ಲಾನ ಪ್ರದೇಶದ ಕಣಿವೆಗೆ ಉರುಳಿದೆ. ಸ್ಥಳದಲ್ಲೇ 16 ಮಂದಿ ಮೃತಪಟ್ಟು, 19 ಗಂಭಿರ ಹಾಗೂ 8 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ರಾಮ್'ಬನ್ ಜಿಲ್ಲೆಯ ಹಿರಿಯ ವರಿಷ್ಠಾಧಿಕಾರಿ ಮೋಹನ್ ಲಾಲ್ ತಿಳಿಸಿದ್ದಾರೆ

ಅಮರನಾಥ ಯಾತ್ರಿಕರಿಗೆ ಆದಂತಹ ದುರ್ಘಟನೆ ಇದು ಎರಡನೆಯದಾಗಿದ್ದು ಜುಲೈ 10ರಂದು ಗುಜರಾತ್'ನಿಂದ ಜಮ್ಮುವಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಬಸ್'ಗೆ ಉಗ್ರರು ದಾಳಿ ನಡೆಸಿದ ಪರಿಣಾಮ 7 ಮಂದಿ ಮೃತಪಟ್ಟಿದ್ದರು. ಈವರ್ಷ 1.2 ಲಕ್ಷಮಂದಿಯಾತ್ರೆಗೆತೆರಳಲುನೋಂದಾಯಿಸಿದ್ದಾರೆ.