ಮಂಗಳೂರಿಗೆ ತೆರಳುತ್ತಿದ್ದ ರೈಲು ಹಳಿತಪ್ಪಿದೆ. ಬೆಳ್ಳಂಬೆಳಗ್ಗೆ ಚೆನ್ನೈನಿಂದ ಆಗಮಿಸುತ್ತಿದ್ದ ರೈಲಿನ 2 ಬೋಗಿಗಳು ಹಳಿತಪ್ಪಿದ್ದು, ಇದರಿಂದ ಯಾವುದೇ ಪ್ರಾಣಹಾನಿಯಾಗಿಲ್ಲ.
ಕೇರಳ : ಚೆನ್ನೈ - ಮಂಗಳೂರು ಎಕ್ಸ್ ಪ್ರೆಸ್ ರೈಲಿನ 2 ಬೋಗಿಗಳು ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಹಳಿತಪ್ಪಿವೆ. ಈ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ.
ಕೇರಳದ ಶೋರಾನ್ ಪುರ ರೈಲ್ವೆ ನಿಲ್ದಾಣದ ಬಳಿ ಬೆಳಗ್ಗೆ 6.30ರ ಸುಮಾರಿಗೆ ಈ ಅವಘಡವಾಗಿದೆ.
ವಾರದ 7 ದಿನಗಳ ಕಾಲ ಸಂಚರಿಸುವ ಈ ರೈಲು ಸಂಜೆ 5 ಗಂಟೆ ವೇಳೆಗೆ ಚೆನ್ನೈ ನಿಲ್ದಾಣದಿಂದ ಹೊರಟು, ಬೆಳಗ್ಗೆ 9 ಗಂಟೆಗೆ ಮಂಗಳೂರು ತಲುಪಬೇಕಿತ್ತು. ಒಟ್ಟು 16 ಗಂಟೆಗಳ ಪ್ರಯಾಣದ ಬಳಿಕ ರೈಲು ಮಂಗಳೂರು ರೈಲು ನಿಲ್ದಾಣ ತಲುಪುತಿತ್ತು.
ಆದರೆ ಇದೀಗ ಹಳಿತಪ್ಪಿದ ಹಿನ್ನೆಲೆ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 26, 2019, 11:24 AM IST