ಕೆಪಿಎಸ್’ಸಿ ಕರ್ಮಕಾಂಡ ಪ್ರಕರಣವೊಂದು ಬಯಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರು ಅಮಾನತುಗೊಂಡಿದ್ದಾರೆ. 

ಗುಲ್ಬರ್ಗಾ (ಮಾ. 17): ಕೆಪಿಎಸ್’ಸಿ ಕರ್ಮಕಾಂಡ ಪ್ರಕರಣವೊಂದು ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರು ಅಮಾನತುಗೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಕ್ರಮವಾಗಿ ನೇಮಕವಾದ ಅಭ್ಯರ್ಥಿಗಳ ಬಳಿ ಡೀಲ್ ನಡೆಸುತ್ತಿದ್ದ ಇಬ್ಬರು ಪೇದೆಗಳಾದ ಅಶೋಕ್ ನಗರ ಠಾಣೆ ರೈಟರ್ ನೆಹರು ಸಿಂಗ್ & ಪೇದೆ ಮಲ್ಲಿಕಾರ್ಜುನ್ ಎಂಬುವವರು ಅಮಾನತುಗೊಂಡಿದ್ದಾರೆ. ಕಲಬುರಗಿ ಎಸ್ಪಿ ಎನ್ ಶಶಿಕುಮಾರ್ ಆದೇಶ ಅಮಾನತು ಆದೇಶ ನೀಡಿದ್ದಾರೆ. 
ಅಕ್ರಮವಾಗಿ ನೇಮಕವಾದ ಅಭ್ಯರ್ಥಿಗಳ ಬಳಿ ಲಕ್ಷಾಂತರ ರೂಪಾಯಿ ಹಣ ಡೀಲ್ ಮಾಡುತ್ತಿದ್ದರು. ಅಕ್ರಮವಾಗಿ ನೇಮಕಗೊಂಡಿರಿ, ಕೆಲಸ ಕಳೆದುಕೊಳ್ಳುತ್ತೀರಿ ಅಂತಾ ಧಮ್ಕಿ ಹಾಕಿ ಹಣ ವಸೂಲಿ ಮಾಡುತ್ತಿದ್ದರು ಎನ್ನಲಾಗಿದೆ. ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.