ಬೆಂಗಳೂರು(ಅ.5):  ನಿರ್ಮಾಣ ಹಂತದಲ್ಲಿದ 5 ಅಂತಸ್ತಿನ ಕಟ್ಟಡವೊಂದು ಕುಸಿದು ಅವಶೇಷಗಳಡಿ ಸಿಲುಕಿ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಚ್​ಎಸ್​ಆರ್ ಲೇಔಟ್​ನಲ್ಲಿ ನಡೆದಿದೆ. 
ಒರಿಸ್ಸಾ ಮೂಲದ ಸೆಕ್ಯೂರಿಟಿ ಗಾರ್ಡ್​ ಅಶೋಕ್(40)​ ಮೃತ ವ್ಯಕ್ತಿ. ಮತ್ತಿಬ್ಬರ ಕಾರ್ಮಿಕರ ಹೆಸರು ತಿಳಿದು ಬಂದಿಲ್ಲ.

Add Asianetnews Kannada as a Preferred SourcegooglePreferred

ಮಧ್ಯಾಹ್ಯ 12:30ಕ್ಕೆ ಕುಸಿದ ಕಟ್ಟಡದ ಅವೇಶಷಗಳಡಿ ಹಲವರು ಸಿಲುಕಿದ್ದರು. ಪ್ರತ್ಯಕ್ಷದರ್ಶಿಗಳ ಪ್ರಕಾರ ಕಟ್ಟಡ ಕುಸಿಯುವುದಕ್ಕೂ ಮುನ್ನ ದೊಡ್ಡ ಸ್ಫೋಟದ ಶಬ್ದ ಕೇಳಿ ಬಂತು ಎಂದು ತಿಳಿದುಬಂದಿದೆ. ಮಾಹಿತಿ ಪ್ರಕಾರ ಕಟ್ಟಡದಲ್ಲಿ 20ಕ್ಕೂ ಅಧಿಕ ಕಾರ್ಮಿಕರು ಇದ್ದರು ಎಂದು ತಿಳಿದುಬಂದಿದೆ. ಈಗಗಾಲೇ 8 ವರ್ಷದ ಓರ್ವ ಬಾಲಕ ಸೇರಿದಂತೆ ನಾಲ್ವರನ್ನು ರಕ್ಷಿಸಲಾಗಿದೆ.

ನಾಲ್ಕು ಮಂದಿಯನ್ನು ರಕ್ಷಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ . ನಿಯಮ ಬಾಹಿರವಾಗಿ ಕಟ್ಟಡ ನಿರ್ಮಾಣ ಮಾಡಲಾಗಿತ್ತು ಎನ್ನಲಾಗಿದ್ದು, ಈ ಕಟ್ಟದ ಶ್ರೀನಿವಾಸ್​ ರೆಡ್ಡಿ ಎಂಬುವವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಭರದಿಂದ ಸಾಗುತ್ತಿರುವ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಅಗ್ನಿಶಾಮಕದಳದ ಉಪನಿರ್ದೇಶಕ ಮಾರ್ಕಂಡಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. 

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಮೇಯರ್ ಜೆ. ಪದ್ಮಾವತಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳಪೆ ಕಾಮಗಾರಿ ಇದಕ್ಕೆ ಕಾರಣವಾಗಿದ್ದು, ಕಟ್ಟಡದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವುದಾಗಿ ಬೆಂಗಳೂರು ನಗರ ಆಯುಕ್ತ ಮೇಘರೀಕ್ ತಿಳಿಸಿದ್ದಾರೆ.