ಚಾಲಕನ ನಿರ್ಲಕ್ಷದಿಂದ ರಸ್ತೆ ಪಕ್ಕ ಬಸ್​ಗಾಗಿ ಕಾಯುತ್ತಿದ್ದ ಮೂವರು ಯಾತ್ರಿಕರ ಮೇಲೆ ಆಲ್ಟೋ ಕಾರು ಹರಿದು ಇಬ್ಬರು ಯಾತ್ರಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ. ಎಂ.ಕೆ. ಹುಬ್ಬಳಿಯ ಮಲಪ್ರಭಾ ಸೇತುವೆ ಬಳಿ ಈ ಘಟನೆ ನಡೆದಿದೆ.

ಬೆಳಗಾವಿ (ಮಾ.27): ಚಾಲಕನ ನಿರ್ಲಕ್ಷದಿಂದ ರಸ್ತೆ ಪಕ್ಕ ಬಸ್​ಗಾಗಿ ಕಾಯುತ್ತಿದ್ದ ಮೂವರು ಯಾತ್ರಿಕರ ಮೇಲೆ ಆಲ್ಟೋ ಕಾರು ಹರಿದು ಇಬ್ಬರು ಯಾತ್ರಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ. ಎಂ.ಕೆ. ಹುಬ್ಬಳಿಯ ಮಲಪ್ರಭಾ ಸೇತುವೆ ಬಳಿ ಈ ಘಟನೆ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರತ್ನವ್ವ ಶಿವಬಸಪ್ಪ (55) ಹಾಗೂ ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಮೃ ದುರ್ದೈವಿಗಳು. ಗಂಭೀರ ಗಾಯಗೊಂಡ ಗೌರವ್ವನನ್ನು ಬೆಳಗಾವಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಗಂಗಾಂಬಿಕೆ ದೇವಿ ದರ್ಶನ ಪಡೆದು ಬಸ್​ಗಾಗಿ ಕಾಯುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕಿತ್ತೂರು ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.