ಇದೇ ನ್ಯಾಯಾಧೀಶರು ಉದ್ಯಮಿಯೊಬ್ಬರ ಪುತ್ರ ಬಿಎಂಡಬ್ಲ್ಯು ಕಾರನ್ನು ಬೇಕಾಬಿಟ್ಟಿ ಚಲಾಯಿಸಿ ಬೈಕ್ ಸವಾರನ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಕಾರು ಚಾಲನೆ ಮಾಡಿದ್ದ 30ರ ಹರೆಯದ ಉತ್ಸವ್ ಭಾಸಿನ್‍ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.

ನವದೆಹಲಿ(ಜು.17): ವ್ಯಕ್ತಿ ಹತ್ಯೆ ಮಾಡಿದರೆ 2 ವರ್ಷ ಶಿಕ್ಷೆ ಜಾನುವಾರುಗಳನ್ನು ಕೊಂದರೆ 10 ವರ್ಷ ಜೈಲು ಇದು ನಮ್ಮದೇಶದ ನ್ಯಾಯಾಂಗ ವ್ಯವಸ್ಥೆ. ಸ್ವತಃ ಹರ್ಯಾಣದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಂಜೀವ್ ಕುಮಾರ್ ಈ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೇ ನ್ಯಾಯಾಧೀಶರು ಉದ್ಯಮಿಯೊಬ್ಬರ ಪುತ್ರ ಬಿಎಂಡಬ್ಲ್ಯು ಕಾರನ್ನು ಬೇಕಾಬಿಟ್ಟಿ ಚಲಾಯಿಸಿ ಬೈಕ್ ಸವಾರನ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಕಾರು ಚಾಲನೆ ಮಾಡಿದ್ದ 30ರ ಹರೆಯದ ಉತ್ಸವ್ ಭಾಸಿನ್‍ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ. ಜೊತೆಗೆ ಮೃತರ ಕುಟುಂಬಕ್ಕೆ 10 ಲಕ್ಷ ಮತ್ತು ಗಾಯಾಳು ವ್ಯಕ್ತಿಯ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಧನ ನೀಡುವಂತೆ ತೀರ್ಪು ನೀಡಿದ್ದರು

ಆದರೆ ನಮ್ಮ ದೇಶದ ಹಲವು ರಾಜ್ಯಗಳಲ್ಲಿ ಜಾನುವಾರುಗಳನ್ನು ಹತ್ಯೆ ಮಾಡಿದರೆ 7 ರಿಂದ 10 ವರ್ಷಗಳ ಕಾಲ ಶಿಕ್ಷೆ ವಿಧಿಸಲಾಗುತ್ತದೆ' ಎಂದು ನಮ್ಮ ವ್ಯವಸ್ಥೆ ಎಂದು ಅಸಹಾಕತೆ ವ್ಯಕ್ತಪಡಿಸಿದ್ದಾರೆ. 2008 ಸೆಪ್ಟೆಂಬರ್ 11ರಂದು ರಾತ್ರಿ ಬಿಬಿಎ ವಿದ್ಯಾರ್ಥಿಯೊಬ್ಬರ ಮೇಲೆ ತನ್ನ ಬಿಎಂಡ್ಲ್ಯು ಕಾರು ಹರಿಸಿ ಸಾವಿಗೆ ಕಾರಣವಾಗಿದ್ದ. ಅಲ್ಲದೆ ಬಾಸಿನ್'ಗೆ ಜಾಮೀನು ಪಡೆಯುವ ಅವಕಾಶವನ್ನು ನೀಡಲಾಗಿದೆ.