ಖಚಿತ ಮಾಹಿತಿ ಮೇರೆಗೆ ಸಿಆರ್​​ಪಿಎಫ್​​​​, ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಸಿ 21 ನಕ್ಸಲರನ್ನು ಹೊಡೆದುರುಳಿಸಲಾಗಿದೆ.

ಭುವನೇಶ್ವರ(ಅ.24): ಮಲ್ಕನ್​ಗಿರಿ ಅರಣ್ಯದಲ್ಲಿ ನಕ್ಸಲರು-ಯೋಧರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ 21 ನಕ್ಸಲರನ್ನು ಹತ್ಯೆ ಮಾಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಇಬ್ಬರು ಪೊಲೀಸ್ ಕಾನ್ಸ್​​ಸ್ಟೇಬಲ್​ಗಳಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಖಚಿತ ಮಾಹಿತಿ ಮೇರೆಗೆ ಸಿಆರ್​​ಪಿಎಫ್​​​​, ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಸಿ 21 ನಕ್ಸಲರನ್ನು ಹೊಡೆದುರುಳಿಸಲಾಗಿದೆ.

 ಒಡಿಶಾದ ಮಲ್ಕಗಿರಿಯಿಂದ ಸುಮಾರು 10 ಕಿ.ಮೀ ದೂರದ ಎವೋಬಿ ಎಂಬ ಅರಣ್ಯಪ್ರದೇಶದಲ್ಲಿ ಮಾವೋವಾದಿ ಮುಖಂಡರು ಸಭೆ ನಡೆಸುತ್ತಿದ್ದರು. ಸುಮಾರು 50-60 ಮಂದಿ ಸಭೆಯಲ್ಲಿ ಭಾಗವಹಿಸಿದ್ದರು ಎನ್ನಲಾಗುತ್ತಿದ್ದು, ಏಕಾಏಕಿ ಯೋಧರು ಕ್ಯಾಂಪಿನ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ 21 ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು ಇದರಲ್ಲಿ ಎಕೆ47, ಎಸ್ಎಲ್ಆರ್ ಶಸ್ತ್ರಾಸ್ತ್ರಗಳು ಸೇರಿವೆ ಎಂದು ವರದಿಯಾಗಿದೆ.