Asianet Suvarna News Asianet Suvarna News

ಕಾಶ್ಮೀರಕ್ಕೆ ಮತ್ತೆ 25000 ಯೋಧರ ರವಾನೆ

ಕಾನೂನು ಸುವ್ಯವಸ್ಥೆ ಹಾಗೂ ಭದ್ರತೆ ದೃಷ್ಟಿಯಿಂದ ಕೇಂದ್ರ ಸರ್ಕಾರ ಇದೀಗ 25,000ಕ್ಕೂ ಹೆಚ್ಚು ಅರೆ ಸೇನಾ ಪಡೆಯ ಸಿಬ್ಬಂದಿಯನ್ನು ಜಮ್ಮು ಕಾಶ್ಮೀರಕ್ಕೆ ಕಳುಹಿಸಿಕೊಟ್ಟಿದೆ.

25000 More Troops Being Moved To Kashmir
Author
Bengaluru, First Published Aug 2, 2019, 11:40 AM IST

ಶ್ರೀನಗರ [ಆ.02]: ಇತ್ತಿಚೆಗಷ್ಟೇ ಜಮ್ಮು- ಕಾಶ್ಮೀರದಲ್ಲಿ ಹೆಚ್ಚುವರಿ ಭದ್ರತೆಗಾಗಿ 10 ಸಾವಿರ ಯೋಧರನ್ನು ಕಳುಹಿಸಿಕೊಟ್ಟಿದ್ದ ಕೇಂದ್ರ ಸರ್ಕಾರ ಇದೀಗ 25,000ಕ್ಕೂ ಹೆಚ್ಚು ಅರೆ ಸೇನಾ ಪಡೆಯ ಸಿಬ್ಬಂದಿಯನ್ನು ಕಳುಹಿಸಿಕೊಟ್ಟಿದೆ. 

ಗುರುವಾರ ಮುಂಜಾನೆಯಿಂದ ಸೇನಾ ತುಕಡಿಗಳು ಆಗಮಿಸುತ್ತಿದ್ದು, ವಿವಿಧ ಭಾಗಗಳಿಗೆ ನಿಯೋಜಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಹಾಗೂ ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಡಿಢೀರನೆ ಅತಿಯಾದ ಸೇನಾ ಜಮಾವಣೆ ಕಾಶ್ಮೀರದಲ್ಲಿ ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

ಇತ್ತೀಚೆಗಷ್ಟೇ ಬಿಜೆಪಿ ನಾಯಕರು ಜಮ್ಮು ಮತ್ತು ಕಾಶ್ಮೀರದಲ್ಲಿ ಪಕ್ಷದ ನಾಯಕರನ್ನು ದೆಹಲಿಗೆ ಕರೆಸಿಕೊಂಡು ವಿಸ್ತೃತ ಚರ್ಚೆ ನಡೆಸಿದ್ದಾರೆ. ಈ ಸಭೆಯಲ್ಲಿ ಚರ್ಚಿಸಲಾದ ಅಂಶಗಳು ಬಹಿರಂಗವಾಗಿಲ್ಲವಾದರೂ, ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ಆ.15ರ ಬಳಿಕ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆ.15ಕ್ಕೆ ಅಮರನಾಥ ಯಾಥ್ರೆ ಮುಕ್ತಾಯಗೊಳ್ಳಲಿದ್ದು, ಬಳಿಕ ಕೇಂದ್ರದಿಂದ ದೊಡ್ಡ ಮಟ್ಟದ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ.

- ರಾಜ್ಯವನ್ನು ಮೂರು ವಿಭಾಗಗಳನ್ನಾಗಿ ವಿಂಗಡಿಸಿ ಚುನಾವಣೆ ನಡೆಸುವ ಸಾಧ್ಯತೆ

- ಕಾಶ್ಮೀರದ ಜನರಿಗೆ ವಿಶೇಷ ಸೌಲಭ್ಯ ನೀಡುವ ಸಂವಿಧಾನದ ಪರಿಚ್ಛೇದ 35ಎ ರದ್ದು

- ಜಮ್ಮು- ಕಾಶ್ಮೀರಕ್ಕೆ ಸ್ವಾಯತ್ತ ಸ್ಥಾನಮಾನ ನೀಡುವ 370ನೇ ವಿಧಿ ರದ್ದು ಸಾಧ್ಯತೆ

- ಜಮ್ಮು-ಕಾಶ್ಮೀರದಲ್ಲಿ ಅಕ್ಟೋಬರ್‌- ಸೆಪ್ಟೆಂಬರ್‌ನಲ್ಲಿ ಚುನಾವಣೆ ಘೋಷಣೆ ಹಿನ್ನೆಲೆ

Follow Us:
Download App:
  • android
  • ios