3 ಐಎಎಸ್, 1 ಐಪಿಎಸ್ ಅಧಿಕಾರಿ ವರ್ಗಾವಣೆ
ಸರ್ಕಾರದ ಸ್ಥಿರತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ನಡುವೆಯೇ ರಾಜ್ಯದ ಸಮ್ಮಿಶ್ರ ಸರ್ಕಾರ IPS IAS ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು [ಜು.17] : ಸರ್ಕಾರದ ಸ್ಥಿರತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ನಡುವೆಯೇ ರಾಜ್ಯದ ಸಮ್ಮಿಶ್ರ ಸರ್ಕಾರ ಮಂಗಳವಾರ ಮೂರು ಮಂದಿ ಐಎಎಸ್ ಅಧಿಕಾರಿಗಳು ಮತ್ತು ಒಬ್ಬ ಐಪಿಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಐಎಎಸ್ ಅಧಿಕಾರಿಗಳು: ಡಾ.ರಜನೀಶ್ ಗೋಯಲ್-ಯುವ ಸಶಕ್ತೀಕರಣ ಮತ್ತು ಕ್ರೀಡಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡಾ.ಜಿ.ಕಲ್ಪನಾ- ಸಾರ್ವಜನಿಕ ಉದ್ಯಮಗಳ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಪಿಲ್ ಮೋಹನ್- ರಾಜ್ಯ ಪುನರ್ವಸತಿ ಮತ್ತು ಪರಿಹಾರ ಆಯುಕ್ತ ಮತ್ತು ಪದನಿಮಿತ್ತ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ.
ಐಪಿಎಸ್ ಅಧಿಕಾರಿ : ಟಿ.ಆರ್.ಸುರೇಶ್- ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ.