ನಕ್ಸಲರಿಂದ ಸಿಆರ್ಪಿಎಫ್ ವಾಹನ ಸ್ಫೋಟ: ನಾಲ್ವರು ಹುತಾತ್ಮ!
ಚುನಾವಣೆ ಎದುರಿಸುತ್ತಿರುವ ಛತ್ತೀಸ್ಗಢ್ ದಲ್ಲಿ ನಕ್ಸಲರ ಅಟ್ಟಹಾಸ! ಸಿಆರ್ಪಿಎಫ್ ಸಿಬ್ಬಂದಿ ತೆರಳುತ್ತಿದ್ದ ವಾಹನವನ್ನು ಸ್ಫೋಟಿಸಿದ ನಕ್ಸಲರು! ಘಟನೆಯಲ್ಲಿ ನಾಲ್ವರು ಸಿಆರ್ಪಿಎಫ್ ಯೋಧರು ಹುತಾತ್ಮ!
ಪ್ರಬಲ ನೆಲಬಾಂಬ್ ಸ್ಫೋಟಿಸಿ ಯೋಧರನ್ನು ಬಲಿ ಪಡೆದ ನಕ್ಸಲರು
ರಾಯಪುರ್(ಅ.27): ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಛತ್ತೀಸ್ಗಢ್ದಲ್ಲಿ ನಕ್ಸಲರು ಸಿಆರ್ಪಿಎಫ್ ಸಿಬ್ಬಂದಿ ತೆರಳುತ್ತಿದ್ದ ವಾಹನವನ್ನು ಸ್ಫೋಟಿಸಿದ್ದು, ಘಟನೆಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಇಂದು ಸಂಜೆ 4 ಗಂಟೆಯ ಸುಮಾರಿಗೆ ಬಿಜಾಪುರ್ ಜಿಲ್ಲೆಯ ಮುರ್ದಂದ್ ಸಿಆರ್ಪಿಎಫ್ ಕ್ಯಾಂಪ್ ಸಮೀಪ ಸಿಆರ್ಪಿಎಫ್ ವಾಹನದ ಮೇಲೆ ನಕ್ಸಲರು ದಾಳಿ ನಡೆಸಿದ್ದಾರೆ.
Four Central Reserve Police Force (CRPF) jawans have lost their lives in an encounter with Naxals in Bijapur. Two jawans are injured. More details awaited. #Chhattisgarh pic.twitter.com/Mrb7IobEFJ
— ANI (@ANI) October 27, 2018
ಈ ಕುರಿರು ಮಾಹಿತಿ ನೀಡಿದ ಬಿಜಾಪುರ್ ಪೊಲೀಸ್ ಅಧೀಕ್ಷಕ ಮೋಹಿತ್ ಗರ್ಗ್, ಘಟನೆಯಲ್ಲಿ ನಾಲ್ವರು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಕ್ಯಾಂಪ್ ನಿಂದ 1 ಕಿ.ಮೀ.ದೂರದಲ್ಲಿ ಸಿಆರ್ಪಿಎಫ್ ನ 6 ಸಿಬ್ಬಂದಿ ತೆರಳುತ್ತಿದ್ದ ಎಂಪಿವಿ(ಸ್ಫೋಟ ನಿರೋಧಕ ವಾಹನ) ವಾಹನವನ್ನು ಪ್ರಬಲ ನೆಲಬಾಂಬ್ ಬಳಸಿ ಸ್ಫೋಟಿಸಿಲಾಗಿದೆ ಎಂದು ಗರ್ಗ್ ತಿಳಿಸಿದ್ದಾರೆ.