ಇವರೆಲ್ಲ ಬಾಗಲಕೋಟೆ ಪಟ್ಟಣದ ನಿವಾಸಿಗಳಾಗಿದ್ದು, ಬಳ್ಳಾರಿಯಿಂದ ಬಾಗಲಕೋಟೆಗೆ ಮರಳುತ್ತಿದ್ದ ವೇಳೆ ಅಪಘಾತವಾಗಿದೆ.

ಬಾಗಲಕೋಟೆ(ಡಿ.30): ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೊಲ್ಲಾಪುರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-50ರಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪಂಕಜ್(48), ಉಮಾಬಾಯಿ(45), ಪುಷ್ಪಾಬಾಯಿ(67), ಶ್ರೀಕಾಂತಾಬಾಯಿ(65) ಮೃತರು. ಇವರೆಲ್ಲ ಬಾಗಲಕೋಟೆ ಪಟ್ಟಣದ ನಿವಾಸಿಗಳಾಗಿದ್ದು, ಬಳ್ಳಾರಿಯಿಂದ ಬಾಗಲಕೋಟೆಗೆ ಮರಳುತ್ತಿದ್ದ ವೇಳೆ ಅಪಘಾತವಾಗಿದೆ. ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.