ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಲ್ಮತ್ಪಾರ ಪ್ರದೇಶದಲ್ಲಿ ನಿನ್ನೆ ರಾತ್ರಿ ನಾಲ್ವರು ಉಗ್ರರನ್ನು ಭಾರತೀಯ ಭದ್ರತಾ ಪಡೆ ಹೊಡೆದುರುಳಿಸಿದೆ. 

ಶ್ರೀನಗರ (ಮಾ. 21): ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಲ್ಮತ್ಪಾರ ಪ್ರದೇಶದಲ್ಲಿ ನಿನ್ನೆ ರಾತ್ರಿ ನಾಲ್ವರು ಉಗ್ರರನ್ನು ಭಾರತೀಯ ಭದ್ರತಾ ಪಡೆ ಹೊಡೆದುರುಳಿಸಿದೆ. 
ಹಲ್ಮತ್ಪಾರ ಪ್ರದೇಶದಲ್ಲಿ ಭಯೋತ್ಪಾದಕರ ಗುಂಪು ಅಡಗಿ ಕುಳಿತಿತ್ತು. ಭಯೋತ್ಪಾದಕರ ಮೇಲೆ ಭದ್ರತಾ ಪಡೆ ಎನ್’​ಕೌಂಟರ್ ನಡೆಸಿದೆ. ಎನ್’​ಕೌಂಟರ್​ನಲ್ಲಿ ನಾಲ್ವರು ಭಯೋತ್ಪಾದಕರು ಹತ್ಯೆಯಾಗಿದ್ದಾರೆ. ಪೊಲೀಸರು & ಸ್ಪೆಶಲ್ ಆಪರೇಷನ್ ಗ್ರೂಪ್ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಮುಗಿಸಿದೆ.