ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ವಾಯುಸೇನೆ ಉಗ್ರರ ಅಡಗುತಾಣಗಳ ಮೇಲೆ ದಾಳಿ ಮಾಡಿ ಸುರಕ್ಷಿತವಾಗಿ ವಾಪಸ್ ಆಗಿದ್ದಾಗಿನಿಂದ, ಇಂಡೋ-ಪಾಕ್ ಗಡಿಯಲ್ಲಿ ಉಗ್ರರು ಹತಾಶೆಯಿಂದ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಲೇ ಇದ್ದಾರೆ.
ಶ್ರೀನಗರ, [ಮಾ.01]: ಪಾಕಿಸ್ತಾನ ಮತ್ತು ಭಾರತದ ಗಡಿಯಲ್ಲಿ ಉದ್ವಿಗ್ನದ ವಾತಾವರಣ ಇದೆ. ಇದರ ಮಧ್ಯೆ ಉಗ್ರರ ಕಿರಿಕ್ ಕಡಿಮೆಯಾಗುತ್ತಿಲ್ಲ.
ಭಾರತ ಗಡಿ ಕುಪ್ವಾರಾ ಪ್ರದೇಶದಲ್ಲಿ ಇಂದು [ಶುಕ್ರವಾರ] ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು CRPF ಯೋಧರು ಹಾಗೂ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.
ಗಡಿ ನಿಯಂತ್ರಣರೇಖೆ ಉಲ್ಲಂಘಿಸಿ ಪಾಕಿಸ್ತಾನ ಯೋಧರಿಂದ ಪದೇ-ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಲೇ ಇದೆ. ಮತ್ತೊಂದೆಡೆ ಉಗ್ರರು ಸಹ ಗಡಿಯಲ್ಲಿ ಭಾರತೀಯ ಸೇನೆ ಮೇಲೆ ದಾಳಿ ನಡೆಸುತ್ತಿದೆ.
ಇದ್ರಿಂದ ಭಾರತ ಸೇನೆಗೆ 2 ಸವಾಲುಗಳನ್ನು ಮೆಟ್ಟಿನಿಲ್ಲಬೇಕಿದೆ. ಒಂದು ಕಡೆ ಪಾಕ್ ಸೇನೆ ಪುಂಡಾ ಹಾಗೂ ಮತ್ತೊಂದೆಡೆ ಉಗ್ರರನ್ನು ಸೆದೆಬಡಿಯುವುದು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Mar 1, 2019, 7:17 PM IST