ಭಾರತೀಯ ನಾವಿಕರನ್ನು ಅಪಹರಿಸಿದ ನೈಜಿರಿಯಾ ಕಡಲ್ಗಳ್ಳರು!
ನೈಜಿರಿಯಾದಲ್ಲಿ ಭಾರತೀಯ ನಾವಿಕರ ಅಪಹರಣ| ಐವರು ಭಾರತೀಯ ನಾವಿಕರನ್ನು ಅಪಹರಿಸಿದ ಕಡಲ್ಗಳ್ಳರು| ಟ್ವೀಟ್ ಮೂಲಕ ಮಾಹಿತಿ ನೀಡಿದ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್| ಭಾರತೀಯ ನಾವಿಕರ ಬಿಡುಗಡೆಗಾಗಿ ನೈಜಿರಿಯಾ ಸರ್ಕಾರದೊಂದಿಗೆ ಮಾತುಕತೆ|
ಅಬುಜಾ(ಮೇ.07): ಸರಕು ಸಾಗಾಣಿಕಾ ಹಡಗಿನ ಮೇಲೆ ದಾಳಿ ಮಾಡಿ, ಭಾರತ ಮೂಲದ ಐವರು ನಾವಿಕರನ್ನು ಕಡಲ್ಗಳ್ಳರು ಅಪಹರಿಸಿರುವ ಘಟನೆ ನೈಜಿರಿಯಾದಲ್ಲಿ ನಡೆದಿದೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಅಪಹರಣಕ್ಕೀಡಾದ ಭಾರತೀಯ ನಾವಿಕರ ಸುರಕ್ಷಿತ ಬಿಡುಗಡೆ ಕ್ರಮ ಕೈಗೊಳ್ಳುವಂತೆ ನೈಜಿರಿಯಾದ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳಿಗೆ ಸೂಚಿಸಿದ್ದಾಗಿ ಹೇಳಿದ್ದಾರೆ.
I have seen news reports about abduction of five Indian sailors by pirates in Nigeria. I am asking Indian High Commissioner to take this up at the highest level with Government of Nigeria for their release.
— Chowkidar Sushma Swaraj (@SushmaSwaraj) May 7, 2019
Abhay - Please take this up and send me a report. @india_nigeria
ಕಡಲ್ಗಳ್ಳರ ವಶದಲ್ಲಿರುವ ಭಾರತೀಯ ನಾವಿಕರ ಬಿಡುಗಡೆಗಾಗಿ ನೈಜಿರಿಯಾ ಸರ್ಕಾರದೊಂದಿಗೆ ಭಾರತ ಸರ್ಕಾರ ಚರ್ಚೆ ನಡೆಸಿದೆ ಎಂದು ಸುಷ್ಮಾ ಮಾಹಿತಿ ನೀಡಿದ್ದಾರೆ.