ಅಜಿತ್ ಮಾದರ ಎಂಬುವವರ ಪುತ್ರಿ ಕಾವೇರಿ ಕೊಳವೆ ಬಾವಿಯಲ್ಲಿ ಸಿಲುಕಿಕೊಂಡಿರುವ ಬಾಲಕಿ.ಐಗಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆಯುತ್ತಿದೆ.ರೈತ ಶಂಕರ್​ ಹಿಪ್ಪರಗಿ ಎಂಬುವರಿಗೆ ಸೇರಿದ ಕೊಳವೆ ಬಾವಿ ಇದಾಗಿದೆ.

ಬೆಳಗಾವಿ(ಏ.22): ಜಿಲ್ಲೆಯ ಅಥಣಿ ತಾಲೂಕಿನ ಝಂಜರುವಾಡ ಗ್ರಾಮದ ಬಳಿ 5 ವರ್ಷದ ಬಾಲಕಿಯೊಬ್ಬಳು 200 ಅಡಿ ಕೊರೆದಿರುವ ಕೊಳವೆ ಬಾವಿಗೆ ಬಿದ್ದಿದ್ದು 30 ಅಡಿ ಆಳಕ್ಕೆ ಸಿಲುಕಿರುವ ಸಾಧ್ಯತೆಯಿದೆ.

ಅಜಿತ್ ಮಾದರ ಎಂಬುವವರ ಪುತ್ರಿ ಕಾವೇರಿ ಕೊಳವೆ ಬಾವಿಯಲ್ಲಿ ಸಿಲುಕಿಕೊಂಡಿರುವ ಬಾಲಕಿ.ಐಗಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆಯುತ್ತಿದೆ.ರೈತ ಶಂಕರ್​ ಹಿಪ್ಪರಗಿ ಎಂಬುವರಿಗೆ ಸೇರಿದ ಕೊಳವೆ ಬಾವಿ ಇದಾಗಿದೆ. ಬೆಳಗಾವಿ ಎಸ್'ಪಿ ರವಿಕಾಂತೇ'ಗೌಡ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಪೊಲೀಸ್ ಹಾಗೂ ವೈದ್ಯಕೀಯ ತಂಡ ಕಾರ್ಯಾಚರಣೆಯಲ್ಲಿ ತೊಡಗಿದೆ.

ಬಾಲಕಿಗೆ ಉಸಿರಾಡಲು ಅನುವಾಗುವಂತೆ ಕೊಳವೆ ಬಾಯಿಯಲ್ಲಿ ಪೈಪ್'ಗಳ ಮೂಲಕ ಆಮ್ಲಜನಕ ಅಳವಡಿಸಲಾಗಿದೆ. ಜಮೀನು ಮಾಲೀಕರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದೆ.