ಭೀಕರ ಅಪಘಾತ : 7 ಮಂದಿ ದುರ್ಮರಣ
ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ದುರ್ಮರಣವನ್ನಪ್ಪಿದ್ದಾರೆ. ಬಸ್ ಹಾಗೂ ಓಮಿನಿ ನಡುವೆ ತಮಿಳುನಾಡಿನ ಸೇಲಂ ಬಳಿ ಅಪಘಾತ ಸಂಭವಿಸಿದೆ.
ಹೊಸೂರು : ಜವರಾಯ ಅಟ್ಟಹಾಸ ಮೆರೆದಿದ್ದು ಭೀಕರ ಅಪಘಾತದಲ್ಲಿ 7 ಜನ ದುರ್ಮರಣವನ್ನಪ್ಪಿದ ಘಟನೆ ತಮಿಳುನಾಡಿನ ಸೇಲಂನ ಬಳಿಯ ಮಾಮ್ಮಂಮ್ ನಲ್ಲಿ ರಾತ್ರಿ ಒಂದು ಗಂಟೆಗೆ ಸಂಭವಿಸಿದೆ.
ಇಬ್ಬರು ಮಹಿಳೆಯರು ಹಾಗೂ ಐವರು ಪುರುಷರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಸೇಲಂ ಕಡೇಗೆ ತೆರಳುತ್ತಿದ್ದ ಬಸ್ ಹಾಗೂ ಓಮಿನಿ ನಡುವೆ ಡಿಕ್ಕಿ ಸಂಭವಿಸಿ ಈ ಅವಘಡ ಸಂಭವಿಸಿದೆ.
ಇನ್ನು ಈ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬಸ್ಸ್ ಡಿಕ್ಕಿ ಹೊಡೆದಿದ್ದು ಈ ವೇಳೆ ಬಸ್ಸು ನಿಯಂತ್ರಣ ಕಳೆದುಕೊಂಡು ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಓಮಿನಿಗೆ ಡಿಕ್ಕಿ ಹೋಡೆದಿದೆ ಎನ್ನಲಾಗಿದೆ.