ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ದುರ್ಮರಣವನ್ನಪ್ಪಿದ್ದಾರೆ.  ಬಸ್ ಹಾಗೂ ಓಮಿನಿ ನಡುವೆ  ತಮಿಳುನಾಡಿನ ಸೇಲಂ ಬಳಿ ಅಪಘಾತ ಸಂಭವಿಸಿದೆ. 

ಹೊಸೂರು : ಜವರಾಯ ಅಟ್ಟಹಾಸ ಮೆರೆದಿದ್ದು ಭೀಕರ ಅಪಘಾತದಲ್ಲಿ 7 ಜನ ದುರ್ಮರಣವನ್ನಪ್ಪಿದ ಘಟನೆ ತಮಿಳುನಾಡಿನ ಸೇಲಂನ ಬಳಿಯ ಮಾಮ್ಮಂಮ್ ನಲ್ಲಿ ರಾತ್ರಿ ಒಂದು ಗಂಟೆಗೆ ಸಂಭವಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಬ್ಬರು ಮಹಿಳೆಯರು ಹಾಗೂ ಐವರು ಪುರುಷರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಸೇಲಂ ಕಡೇಗೆ ತೆರಳುತ್ತಿದ್ದ ಬಸ್ ಹಾಗೂ ಓಮಿನಿ ನಡುವೆ ಡಿಕ್ಕಿ ಸಂಭವಿಸಿ ಈ ಅವಘಡ ಸಂಭವಿಸಿದೆ.

ಇನ್ನು ಈ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬಸ್ಸ್ ಡಿಕ್ಕಿ ಹೊಡೆದಿದ್ದು ಈ ವೇಳೆ ಬಸ್ಸು ನಿಯಂತ್ರಣ ಕಳೆದುಕೊಂಡು ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಓಮಿನಿಗೆ ಡಿಕ್ಕಿ ಹೋಡೆದಿದೆ ಎನ್ನಲಾಗಿದೆ.