ಈ ಬಾರಿ ಮಾಸಿಕ ಪೂಜೆ ಹಿನ್ನೆಲೆಯಲ್ಲಿ ಶಬರಿಮಲೆ ದೇಗುಲವನ್ನು ತೆರೆದಿದ್ದು ಅತ್ಯಧಿಕ ಸಂಖ್ಯೆಯಲ್ಲಿ  ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ನೈಜ ಭಕ್ತರು ಇಲ್ಲಿಗೆ ಭೇಟಿ ನೀಡಿದ್ದರು ಎನ್ನುವ ಸಂಗತಿ ಬೆಳಕಿಗೆ ಬಂದಿದೆ. 

ಶಬರಿಮಲೆ : ಶಬರಿ ಮಲೆ ದೇಗುಲವನ್ನು ಮಾಸಿಕ ಪೂಜೆಯ ಸಲುವಾಗಿ ನವೆಂಬರ್ 5 ಹಾಗೂ 6 ರಂದು ತೆರೆಯಲಾಗಿದ್ದು, ಈ ವೇಳೆ 7300 ಭಕ್ತರು ಶಬರಿಮಲೆಗೆ ಆಗಮಿಸಿದ್ದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆದರೆ ಇಷ್ಟು ಮಂದಿ ಭಕ್ತರಲ್ಲಿ ಕೇವಲ 200 ಮಂದಿ ಮಾತ್ರವೇ ಶ್ರದ್ಧಾ ಭಕ್ತಿಯಿಂದ ದೇವಾಲಯಕ್ಕೆ ಆಗಮಿಸಿದ್ದ ನೈಜ ಭಕ್ತರು ಎನ್ನುವ ವಿಚಾರ ಬೆಳಕಿಗೆ ಬಂದಿದೆ. 

ಪೊಲೀಸರ ವಿಶ್ಲೇಷಣೆ ವೇಳೆಯಲ್ಲಿ ಈ ವಿಚಾರ ತಿಳಿದು ಬಂದಿದ್ದು, ಈ ವೇಳೆ ದೇಗುಲಕ್ಕೆ ಬಿಜೆಪಿ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತರೂ ಕೂಡ ಆಗಮಿಸಿದ್ದರು ಎನ್ನಲಾಗಿದೆ. 

ಕಳೆದ ತಿಂಗಳೂ ಕೂಡ ಮಾಸಿಕ ಪೂಜೆ ಹಿನ್ನೆಲೆಯಲ್ಲಿ ದೇವಾಲಯದ ಬಾಗಿಲನ್ನು ತೆರೆದಿದ್ದು ಈ ವೇಳೆ ಸಾಕಷ್ಟು ಪ್ರಮಾಣದಲ್ಲಿ ಗಂಭೀರ ಗಲಭೆ ನಡೆದಿತ್ತು. ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮಹಿಳೆಯರು ದೇಗುಲವನ್ನು ಪ್ರವೇಶಿಸಲು ಯತ್ನಿಸಿದ್ದರು. ಈ ಬಾರಿಯೂ ಕೂಡ ಗಲಾಟೆ ನಡೆಯಬಹುದಾದ ನಿರೀಕ್ಷೆ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.