ಉತ್ತರ ಭಾರತದಲ್ಲಿ ಮುಂದುವರೆದ ಚಳಿಯ ರೌದ್ರಾವತಾರ| ಹರಿಯಾಣದಲ್ಲಿ ಝಜ್ಜರ್ ನಲ್ಲಿ ಭೀಕರ ಸರಣಿ ರಸ್ತೆ ಅಪಘಾತ| ಮಂಜು ಕವಿದ ಪರಿಣಾಮ ರಸ್ತೆ ಮೇಲಿನ ವಾಹನಗಳೇ ಕಾಣಿಸುತ್ತಿಲ್ಲ| ಟ್ರಕ್ ಗುದ್ದಿದ ಪರಿಣಾಮ ಸರಣಿ ರಸ್ತೆ ಅಪಘಾತ ಸಂಭವಿಸಿದೆ| ಅಪಘಾತದಲ್ಲಿ 8 ಜನರ ದುರ್ಮರಣ, ಹಲವರಿಗೆ ಗಂಭೀರ ಗಾಯ

ಝಜ್ಜರ್(ಡಿ.24): ಉತ್ತರ ಭಾರತದಲ್ಲಿ ಚಳಿಯಹೊಡೆತಕ್ಕೆ ಜನಜೀವನ ತತ್ತರಿಸಿದೆ. ಈ ಮಧ್ಯೆ ಗುರುಗಾಂವ್ ನಲ್ಲಿ ತಾಪಮಾನ ಶೂನ್ಯಕ್ಕೆ ಕುಸಿದ ಪರಿಣಾಮ, ರಸ್ತೆ ಮೇಲೆ ತೀವ್ರ ಮಂಜು ಕವಿದಿದ್ದರಿಂದ ಸರಣಿ ಅಪಘಾತ ಸಂಭವಿಸಿ 8 ಜನ ಸಾವನ್ನಪ್ಪಿದ್ದಾರೆ.

Add Asianetnews Kannada as a Preferred SourcegooglePreferred

ಹರಿಯಾಣದ ಝಜ್ಜರ್ ನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಮಂಜು ಕವಿದಿದ್ದರಿಂದ ರಸ್ತೆ ಮೇಲಿದ್ದ ವಾಹನಗಳು ಕಾಣುತ್ತಿರಲಿಲ್ಲ. ಪರಿಣಾಮ ಬೃಹತ್ ಟ್ರಕ್ ವೊಂದು ತನ್ನ ಮುಂದಿದ್ದ ವಾಹನಗಳಿಗೆ ಢಿಕ್ಕಿ ಹೊಡೆದಿದೆ.

Scroll to load tweet…

ಪರಿಣಾಮ ಸುಮಾರು 10ಕ್ಕೂ ಹೆಚ್ಚು ವಾಹನಗಳು ಈ ಅಪಘಾತದಲ್ಲಿ ಜಖಂಗೊಂಡಿದ್ದು, ದುರ್ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಟ್ರಕ್ ಮುಂದಿದ್ದ ಜೀಪ್ ನಲ್ಲಿ ಸಂಚರಿಸುತ್ತಿದ್ದ ಸುಮಾರು 5ಕ್ಕೂ ಹೆಚ್ಚು ಮಂದಿ ಈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಗಾಯಾಳುಗಳನ್ನು ಝಜ್ಜರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.