ಸಿಯಾಚಿನ್ ನಲ್ಲಿ ಹಿಮಪಾತ/ ಹಿಮದಡಿ ಸಿಲುಕಿಕೊಂಡ 8 ಜನ ಯೋಧರು/ ಮುಂದುವರಿದ ಶೋಧ ಕಾರ್ಯ/ ಸೋಮವಾರ ಮಧ್ಯಾಹ್ನ ಹಿಮಪಾತ
ನವದೆಹಲಿ[ನ. 18] ಸಿಯಾಚಿನ್ ನಲ್ಲಿ ಮತ್ತೆ ಹಿಮಪಾತದ ಆತಂಕ ಕಂಡುಬಂದಿದೆ. ಸಿಯಾಚಿನ್ ಹಿಮಪ್ರದೇಶದಲ್ಲಿ ಇಂದು ಮಧ್ಯಾಹ್ನ ಹಿಮಪಾತವಾದ ಕಾರಣ ಇಬ್ಬರು ಸ್ಥಳೀಯರು ಮೃತಪಟ್ಟಿದ್ದು, 8 ಜನ ಸೈನಿಕರು ಹಿಮದಡಿ ಸಿಲುಕಿಕೊಂಡಿದ್ದಾರೆ.
ಸಿಯಾಚಿನ್ನ 18 ಸಾವಿರ ಅಡಿ ಎತ್ತರದ ಹಿಮಶ್ರೇಣಿಯಲ್ಲಿ ಸೋಮವಾರ ಮಧ್ಯಾಹ್ನ 3.30ರ ವೇಳೆಗೆ ಹಿಮಪಾತ ಸಂಭವಿಸಿದೆ. ಹಿಮದಡಿ ಸಿಲುಕಿರುವ ಸೈನಿಕರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಯೋಧರು ಎಂದಿನಂತೆ ಗಸ್ತಿನಲ್ಲಿದ್ದಾಗ ಈ ಅವಘಡ ಸಂಭವಿಸಿದೆ. ಹಿಮದಡಿ ಸಿಲುಕಿರುವ ಯೋಧರಿಗಾಗಿ ಶೋಧ ಮುಂದುವರಿದಿದೆ.
ನೆನೆ ನೆನೆ ಹನುಮಂತಪ್ಪ ಕೊಪ್ಪದ್ ಅವರನ್ನ
2016ರ ಹನುಮಂತಪ್ಪ ಪ್ರಕರಣದ ಕಹಿ ನೆನಪು: 2016ರಲ್ಲಿ ಸಿಯಾಚಿನ್ನಲ್ಲಿ ಸಂಭವಿಸಿದ್ದ ಭಾರೀ ಹಿಮಪಾತದಲ್ಲಿ ಸಿಲುಕಿ ಕರ್ನಾಟಕದ ಯೋಧ ಹನುಮಂತಪ್ಪ ಕೊಪ್ಪದ್ 6 ದಿನಗಳ ಬಳಿಕ ಪತ್ತೆಯಾಗಿದ್ದರು. ಅವರನ್ನು ಜೀವಂತವಾಗಿ ಪತ್ತೆ ಮಾಡಿದ್ದರೂ ಬಹು ಅಂಗಾಂಗ ವೈಫಲ್ಯದಿಂದ ಸಾವಿಗೀಡಾಗಿದ್ದರು. ಜೀವನ್ಮರಣ ಹೋರಾಟ ನಡೆಸಿದ್ದ ವೀರಯೋಧ ಹನುಮಂತಪ್ಪ ಕೊಪ್ಪದ್ ಅವರಿಗೆಮರಣೋತ್ತರ ಶೌರ್ಯ ಪ್ರಶಸ್ತಿ ನೀಡಲಾಗಿತ್ತು.
