Asianet Suvarna News Asianet Suvarna News

ಸಾವಿನಲ್ಲೂ ಒಂದಾದ ದಂಪತಿ..!

ಸಾವಿನಲ್ಲೂ ಗಂಂಡ-ಹೆಂಡತಿ ಒಂದಾಗಿದ್ದಾರೆ. ಆಂಬುಲೆನ್ಸ್​ನಲ್ಲಿ ಮೃತಪಟ್ಟ ಪತಿಯ ಶವವನ್ನು ಮನೆಗೆ ಸಾಗಿಸುತ್ತಿದ್ದ ವೇಳೆ ಅಪಘಾತದಲ್ಲಿ ಪತ್ನಿ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಬಳಿ ನಡೆದಿದೆ.

A Woman Dies in Tractor and Ambulance  crash at Raichur
Author
Bengaluru, First Published Sep 24, 2018, 3:08 PM IST

ರಾಯಚೂರು, [ಸೆ.24]: ಸಾವಿನಲ್ಲೂ ಗಂಂಡ-ಹೆಂಡತಿ ಒಂದಾಗಿದ್ದಾರೆ. ಆಂಬುಲೆನ್ಸ್​ನಲ್ಲಿ ಮೃತಪಟ್ಟ ಪತಿಯ ಶವವನ್ನು ಮನೆಗೆ ಸಾಗಿಸುತ್ತಿದ್ದ ವೇಳೆ ಅಪಘಾತದಲ್ಲಿ ಪತ್ನಿ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಬಳಿ ನಡೆದಿದೆ.

ಗಂಗಪ್ಪ ಎಂಬುವರು ಅನಾರೋಗ್ಯದಿಂದ ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಆಸ್ಪತ್ರೆಯಲ್ಲೇ ಮೃತಪಟ್ಟ ಅವರ ಶವವನ್ನು ಆಂಬುಲೆನ್ಸ್​ನಲ್ಲಿ ಸ್ವಗ್ರಾಮ ಸುರಪುರಕ್ಕೆ ತೆಗೆದುಕೊಂಡು ಬರಲಾಗುತ್ತಿತ್ತು. ಈ ವೇಳೆ ಮಸ್ಕಿ ಬಳಿ ಆಂಬುಲೆನ್ಸ್​ಗೆ ಟ್ರ್ಯಾಕ್ಟರ್​ ಡಿಕ್ಕಿ ಹೊಡೆದಿದೆ.

ಈ ಘಟನೆಯಲ್ಲಿ ಗಂಗಪ್ಪ ಪತ್ನಿ ಶ್ರೀದೇವಿ (30) ಸೇರಿ ನಾಲ್ವರು ತೀವ್ರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮಸ್ಕಿ ಆಸ್ಪತ್ರೆಗೆ ಸೇರಿಸುವ ಮಾರ್ಗಮಧ್ಯದಲ್ಲಿ ಶ್ರೀದೇವಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಸ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us:
Download App:
  • android
  • ios