ಆಧಾರ್’ ಕಡ್ಡಾಯಗೊಳಿಸುವಿಕೆ ಹಾಗೂ ವ್ಯಕ್ತಿಯ ಖಾಸಗಿತನದ ಬಗ್ಗೆ ಚರ್ಚೆಗಳು ನಡೆಯುತ್ತಿರುವ ನಡುವೆಯೇ ಹೊಸ ಆಧಾರ್ ನಿಯಮವೊಂದು ಜಾರಿಗೆ ಬರಲಿದೆ. ಹೊಸ ನಿಯಮದ ಪ್ರಕಾರ ವ್ಯಕ್ತಿಯ ಮರಣ ಪ್ರಮಾಣ ಪತ್ರ ಪಡೆಯಬೇಕಾದರೆ, ಮೃತ ವ್ಯಕ್ತಿಯನ್ನು ಗುರುತಿಸಲು ಇನ್ಮುಂದೆ ಆತನ/ಆಕೆಯ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು, ಎಂದು ಏಎನ್ಐ ವರದಿ ಮಾಡಿದೆ.

ನವದೆಹಲಿ: ಆಧಾರ್’ ಕಡ್ಡಾಯಗೊಳಿಸುವಿಕೆ ಹಾಗೂ ವ್ಯಕ್ತಿಯ ಖಾಸಗಿತನದ ಬಗ್ಗೆ ಚರ್ಚೆಗಳು ನಡೆಯುತ್ತಿರುವ ನಡುವೆಯೇ ಹೊಸ ಆಧಾರ್ ನಿಯಮವೊಂದು ಜಾರಿಗೆ ಬರಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೊಸ ನಿಯಮದ ಪ್ರಕಾರ ವ್ಯಕ್ತಿಯ ಮರಣ ಪ್ರಮಾಣ ಪತ್ರ ಪಡೆಯಬೇಕಾದರೆ, ಮೃತ ವ್ಯಕ್ತಿಯನ್ನು ಗುರುತಿಸಲು ಇನ್ಮುಂದೆ ಆತನ/ಆಕೆಯ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು, ಎಂದು ಏಎನ್ಐ ವರದಿ ಮಾಡಿದೆ.

ಮುಂಬರುವ ಅಕ್ಟೋಬರ್ 1ರಿಂದ ನಿಯಮವು ದೇಶಾದ್ಯಂತ ಜಾರಿಯಾಗಲಿದೆ ಎನ್ನಲಾಗಿದೆ.

ಈ ಹಿಂದೆ ಸರ್ಕಾರವು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಆಧಾರ್ ಕಾರ್ಡನ್ನು ಕಡ್ಡಾಯಗೊಳಿಸಿತ್ತು. ಅದೇ ರೀತಿ ಜು. 1 ರಿಂದ ಪ್ಯಾನ್ ಪ್ಯಾನ್ ಕಾರ್ಡ್’ಗೆ ಆಧಾರ್ ಕಾರ್ಡ್ ಲಿಂಕ್ ಮಾಡವುದು ಕಡ್ಡಾಯಗೊಳಿಸಿದೆ.

ಆಧಾರ್’ಗೆ ಸಂಬಂಧಿಸಿದಂತೆ ವ್ಯಕ್ತಿಯ ಖಾಸಗಿತನದ ಹಕ್ಕು ಮೂಲಭೂತ ಹಕ್ಕು ಹೌದೋ ಅಲ್ಲವೋ ಎಂಬ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ.