ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ಹೇಳಿರುವ ನಟ ಪ್ರಕಾಶ್ ರಾಜ್ ಗೆ ಇದೀಗ ಪಕ್ಷವೊಂದು ಬೆಂಬಲ ನೀಡುವುದಾಗಿ ಘೋಷಿಸಿದೆ. 

ಬೆಂಗಳೂರು : ಮುಂದಿನ ಲೊಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಸೆಂಟ್ರಲ್ ಕೇಂದ್ರದಿಂದ ಸ್ಪರ್ಧೆ ಮಾಡಲು ಬಯಸಿರುವ ನಟ ಪ್ರಕಾಶ್ ರಾಜ್ ಗೆ ಆಮ್ ಆದ್ಮಿ ಪಕ್ಷ ಬೆಂಬಲ ಘೋಷಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮನೀಷ್ ಸಿಸೋಡಿಯಾ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಕಾಶರ್ಶ ರಾಜ್ ಕೂಡ ಪಾಲ್ಗೊಂಡಿದ್ದರು. 
ಈ ವೇಳೆ ಮಾತನಾಡಿದ ಪ್ರಕಾಶ್ ರಾಜ್ ನಾನು ಈ ವರೆಗೂ ಮಾಧ್ಯಮಗಳ ಮೂಲಕ ಅನೇಕ ಪ್ರಶ್ನೆಗಳನ್ನು ಕೇಳಿದ್ದೇನೆ. ಇದೀಗ ಸಂಸತ್ತಿನಲ್ಲಿ ಕೇಳುವ ವಿಷಯ ಪ್ರಸ್ತಾಪಿಸುವ ಸಂದರ್ಭ ಎದುರಾಗಿದೆ. 

ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆ. ಈ ವೇಳೆ ಎಎಪಿ ಎಂಬಲ ಸಿಕ್ಕರೆ ಹೆಚ್ಚು ಸಂತೋಷವಾಗುತ್ತದೆ ಎಂದರು. ಈ ವೇಳೆ ಸಿಸೋಡಿಯಾ ಬೆಂಬಲ ನೀಡುವುದಾಗಿ ಹೇಳಿದರು.