ಕೇರಳಕ್ಕೆ ಯುಎಇ ಸಹಾಯ ವೇಸ್ಟ್ ಆಗುತ್ತಾ?! ಕೇರಳ ಪ್ರವಾಹಕ್ಕೆ ಯುಎಇ 100 ಮಿಲಿಯನ್ ಧನಸಹಾಯ! ವಿದೇಶದಿಂದ ಹಣ ಸ್ವೀಕರಿಸುವುದಕ್ಕೆ ಕಾನೂನಿನ ಅಡ್ಡಿ! ಹಣ ವರ್ಗಾವಣೆ ಕುರಿತು ದ್ವಿಪಕ್ಷೀಯ ಒಪ್ಪಂದವಾಗಿಲ್ಲ  

ಹೈದರಾಬಾದ್(ಆ.22): ಕೇರಳ ಪ್ರವಾಹ ಕಂಡು ಮಮ್ಮಲ ಮರುಗಿದ ಮಧ್ಯಪ್ರಾಚ್ಯ ರಾಷ್ಟ್ರಗಳು, ಕೇರಳ ಪುನರ್ ಸ್ಥಾಪನೆಗೆ ಹೇರಳ ಧನ ಸಹಾಯ ಮಾಡಿವೆ. ಅದರಲ್ಲೂ ಸಂಯುಕ್ತ ಅರಬ್ ರಾಷ್ಟ್ರವೊಂದೇ ಕೇರಳಕ್ಕೆ ಸುಮಾರು 100 ಮಿಲಿಯನ್ ಯುಎಸ್ ಡಾಲರ್ ಧನ ಸಹಾಯದ ಘೋಷಣೆ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆದರೆ ಕೇರಳಕ್ಕೆ ಈ ಧನ ಸಹಾಯ ಸ್ವೀಕರಿಸುವುದೇ ಅತ್ಯಂತ ಕಠಿಣ ಸವಾಲಾಗಿ ಪರಿಣಮಿಸಿದೆ. ಕಾರಣ ಉಭಯ ರಾಷ್ಟ್ರಗಳ ನಡುವೆ ಹಣ ವರ್ಗಾವಣೆಯ ಕುರಿತು ಯಾವುದೇ ದ್ವಿಪಕ್ಷೀಯ ಒಪ್ಪಂದ ಆಗದೇ ಇರುವುದು. ಈ ಹಿಂದೆ ಪ್ರಕೃತಿ ವಿಕೋಪ ಸಂಭವಿಸಿದಾಗ ಯುಎಇಯಲ್ಲಿ ವಾಸಿಸುವ ಭಾರತೀಯರು ಆರ್ ಬಿಐ ಡ್ರಾಫ್ಟ್ ಗೆ ಹಣ ಸಂದಾಯ ಮಾಡುತ್ತಿದ್ದರೇ ವಿನಾ: ನೇರವಾಗಿ ಯುಎಇ ಸರ್ಕಾರ ಭಾರತ ಸರ್ಕಾರಕ್ಕೆ ಹಣ ಸಂದಾಯ ಮಾಡಿದ ಉದಾಹರಣೆ ಇಲ್ಲ.

ಈ ಕುರಿತು ಮಾಹಿತಿ ನೀಡಿರುವ ಸೌದಿ ಅರೆಬಿಯಾಕ್ಕೆ ಭಾರತದ ಮಾಜಿ ರಾಯಭಾರಿ ತಲ್ಮೀಜ್ ಅಹ್ಮದ್, ಯುಎಇ ಘೋಷಿಸಿರುವ ಧನಸಹಾಯ ಭಾರತಕ್ಕೆ ಬರುವುದು ಅನುಮಾನ ಎಂದು ಹೇಳಿದ್ದಾರೆ. ಒಂದು ದೇಶದಲ್ಲಿ ಪ್ರಕೃತಿ ವಿಕೋಪ ಉಂಟಾದಾಗ ಮತ್ತೊಂದು ದೇಶ ಪರಿಹಾರ ಸಾಮಗ್ರಿ ಕಳುಹಿಸಬಹುದೇ ವಿನಾ: ಬನೇರವಾಗಿ ಹಣ ಕಲಳುಹಿಸಿದ ಉದಾಹರಣೆ ಇಲ್ಲ ಎಂದು ಅಹ್ಮದ್ ತಿಳಿಸಿದ್ದಾರೆ.

ಅಲ್ಲದೇ ಭಾರತದ ಕಾನೂನು ಪ್ರಕಾರ ಯಾವುದೇ ದೇಶದಿಂದ ನೇರವಾಗಿ ಹಣ ಸ್ವೀಕರಿಸುವಂತಿಲ್ಲ. ಈ ಕಾರಣಕ್ಕೆ ಯುಎಇ ಧನಸಹಾಯ ಕೇರಳ ಪ್ರವಾಹಕ್ಕೆ ಬಳಕೆಯಾಗುವುದು ಅನುಮಾನ ಎನ್ನಲಾಗಿದೆ. ಅಲ್ಲದೇ ಯುಎಇ ಧನಸಹಾಯದ ಬದಲು ಅಷ್ಟೇ ಪ್ರಮಾಣದ ಪರಿಹಾರ ಸಾಮಗ್ರಿ ಕಳುಹಿಸಿದರೆ ಒಳ್ಳೆಯದು ಎನ್ನುತ್ತಾರೆ ಅಹ್ಮದ್.