ಚಿತ್ರಹಳ್ಳಿಯ ಚಿತ್ರಲಿಂಗೇಶ್ವರ ಅಂಬಿನೋತ್ಸವಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದ್ದು, ಎತ್ತಿನಗಾಡಿಯಲ್ಲಿದ್ದ ಮಲ್ಕಾಪುರ ಗ್ರಾಮದ ಪಾಲಯ್ಯ (28), ವಿಜಿಯಪ್ಪ (30) ಎಂಬುವವರು ಮೃತಪಟ್ಟಿದ್ದು, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಹೊಳಲ್ಕೆರೆ[ಅ.19]: ಎತ್ತಿನಗಾಡಿ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಧಾರುಣವಾಗಿ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಚಿತ್ರಹಳ್ಳಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

Add Asianetnews Kannada as a Preferred SourcegooglePreferred

ಚಿತ್ರಹಳ್ಳಿಯ ಚಿತ್ರಲಿಂಗೇಶ್ವರ ಅಂಬಿನೋತ್ಸವಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದ್ದು, ಎತ್ತಿನಗಾಡಿಯಲ್ಲಿದ್ದ ಮಲ್ಕಾಪುರ ಗ್ರಾಮದ ಪಾಲಯ್ಯ (28), ವಿಜಿಯಪ್ಪ (30) ಎಂಬುವವರು ಮೃತಪಟ್ಟಿದ್ದು, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಮಧ್ಯರಾತ್ರಿ 1 ಗಂಟೆಗೆ ಈ ಅವಘಡ ನಡೆದಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಫತ್ರೆಗೆ ದಾಖಲಿಸಲಾಗಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.