Asianet Suvarna News Asianet Suvarna News

ಕೃಷಿಕ ಪೆಹ್ಲು ಖಾನ್‌ ಹತ್ಯೆ: 6 ‘ಗೋರಕ್ಷಕ’ ಆರೋಪಿಗಳಿಗೆ ಕ್ಲೀನ್ ಚಿಟ್!

ಕಳೆದ ಏಪ್ರಿಲ್‌ನಲ್ಲಿ ರಾಜಸ್ಥಾನದಲ್ಲಿ ಗೋರಕ್ಷಣೆ ಹೆಸರಲ್ಲಿ ನಡೆದಿದ್ದ ಕೃಷಿಕ ಪೆಹ್ಲು ಖಾನ್ ಹತ್ಯೆ ಪ್ರಕರಣದ 6 ಆರೋಪಿಗಳಿಗೆ ರಾಜಸ್ಥಾನ ಪೊಲೀಸರು ಕ್ಲೀನ್‌ಚಿಟ್ ನೀಡಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರೋಪಿಗಳ ವಿರುದ್ಧ ತನಿಖೆಯನ್ನು ಕೈಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Accused in Pehlu Khan Mob Lynching Get Clean Chit

ಜೈಪುರ: ಕಳೆದ ಏಪ್ರಿಲ್‌ನಲ್ಲಿ ರಾಜಸ್ಥಾನದಲ್ಲಿ ಗೋರಕ್ಷಣೆ ಹೆಸರಲ್ಲಿ ನಡೆದಿದ್ದ ಕೃಷಿಕ ಪೆಹ್ಲು ಖಾನ್ ಹತ್ಯೆ ಪ್ರಕರಣದ 6 ಆರೋಪಿಗಳಿಗೆ ರಾಜಸ್ಥಾನ ಪೊಲೀಸರು ಕ್ಲೀನ್‌ಚಿಟ್ ನೀಡಿದ್ದಾರೆ.

ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರೋಪಿಗಳ ವಿರುದ್ಧ ತನಿಖೆಯನ್ನು ಕೈಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆದರೆ ಪೊಲೀಸರ ಈ ಕ್ರಮ ತೀವ್ರ ವಿವಾದಕ್ಕೆ ಕಾರಣವಾಗಿದೆ. ಶಂಕಿತ ಗೋ ರಕ್ಷಕರನ್ನು ರಕ್ಷಿಸುವುದಕ್ಕೆ ಸರ್ಕಾರದಿಂದ ಒತ್ತಡವಿರುವ ಹಿನ್ನೆಲೆಯಲ್ಲಿ, ಅಧಿಕಾರಿಗಳು ಈ ಕ್ರಮ ಕೈಗೊಂಡಿ ದ್ದಾರೆ ಎಂಬ ಆಪಾದನೆ ಕೇಳಿ ಬಂದಿದೆ.

ಹೈನುಗಾರಿಕೆ ನಡೆಸುತ್ತಿದ್ದ ಖಾನ್ ಅಗತ್ಯ ಪರವಾನಿಗೆ ಪಡೆದು ಗೋವುಗಳನ್ನು ಮಾರುಕಟ್ಟೆಯಿಂದ ಮನೆಗೆ ಸಾಗಿಸುತ್ತಿದ್ದ ವೇಳೆ ಅಲ್ವಾರ್‌ನಲ್ಲಿ ದಾಳಿ ನಡೆದಿತ್ತು. ಸಾಯುವ ಮುನ್ನ ಎಲ್ಲಾ 6 ಆರೋಪಿಗಳ ಹೆಸರನ್ನೂ ಪೆಹ್ಲು ಹೇಳಿದ್ದರು

Follow Us:
Download App:
  • android
  • ios