1947ರಲ್ಲಿ ಪಾಕಿಸ್ತಾನದೊಂದಿಗೆ ನಡೆದ ಕದನದಲ್ಲಿ ಜಮ್ಮು ಕಾಶ್ಮೀರವನ್ನು ಭಾರತದೊಂದಿಗೆ ಉಳಿಯುವಂತೆ ಮಾಡಿದರಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಡಿಸಿ 3 ಡಕೋಟ ಯುದ್ಧ ವಿಮಾನವನ್ನು ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಭಾರತೀಯ ವಾಯುಪಡೆಗೆ ಉಡುಗೊರೆಯಾಗಿ ನೀಡಿದ್ದಾರೆ.

ನವದೆಹಲಿ : 1947ರಲ್ಲಿ ಪಾಕಿಸ್ತಾನದೊಂದಿಗೆ ನಡೆದ ಕದನದಲ್ಲಿ ಜಮ್ಮು ಕಾಶ್ಮೀರವನ್ನು ಭಾರತದೊಂದಿಗೆ ಉಳಿಯುವಂತೆ ಮಾಡಿದರಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಡಿಸಿ 3 ಡಕೋಟ ಯುದ್ಧ ವಿಮಾನವನ್ನು ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಭಾರತೀಯ ವಾಯುಪಡೆಗೆ ಉಡುಗೊರೆಯಾಗಿ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ದೆಹಲಿಯ ಆಕಾಶ್‌ ಏರ್‌ಫೋರ್ಸ್‌ ಮೆಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಏರ್‌ ಚೀಫ್‌ ಮಾರ್ಷಲ್ ಬಿರೇಂದ್ರ ಸಿಂಗ್‌ ಧನೋವಾ ಅವರೊಂದಿಗೆ ಉಡುಗೊರೆ ಒಪ್ಪಂದಕ್ಕೆ ರಾಜೀವ್‌ ಚಂದ್ರಶೇಖರ್‌ ಸಹಿ ಹಾಕಿದರು. ರಾಜೀವ್‌ ಚಂದ್ರಶೇಖರ್‌ ಅವರ ತಂದೆ ವಾಯುದಳದಲ್ಲಿ ಏರ್‌ ಕಮಾಂಡರ್‌ ಆಗಿದ್ದ ಎಂ.ಕೆ.ಚಂದ್ರಶೇಖರ್‌ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಎಂ.ಕೆ.ಚಂದ್ರಶೇಖರ್‌ ಅವರು ಖುದ್ದು ಡಕೋಟದ ಪೈಲಟ್‌ ಆಗಿ ಕಾರ್ಯ ನಿರ್ವಹಿಸಿದ್ದರು.

ಡಿಸಿ 3 ಡಕೋಟ ವಿಮಾನ ಸಂಖ್ಯೆ ವಿಪಿ 905ಗೆ ಪರಶುರಾಮ ಎಂಬ ಹೆಸರಿಡಲಾಗಿದೆ. ಇದೇ ವಿಮಾನ 1947ರ ಅಕ್ಟೋಬರ್‌ 27ರಂದು ಜಮ್ಮು ಕಾಶ್ಮೀರದ ಶ್ರೀನಗರಕ್ಕೆ ಒಂದು ಸಿಖ್‌ ರೆಜಿಮೆಂಟ್‌ ಅನ್ನು ಸಾಗಿಸಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ರಾಜೀವ್‌ ಚಂದ್ರಶೇಖರ್‌, ಡಕೋಟ ನನ್ನ ಬಾಲ್ಯದ ಭಾಗವಾಗಿತ್ತು. ನನ್ನ ತಂದೆ ಈ ವಿಮಾನವನ್ನು ದೇಶದೆಲ್ಲೆಡೆ ಹಾರಿಸಿದ್ದರು. ಇಂದು ಡಿಸಿ 3 ಡಕೋಟವನ್ನು ಭಾರತೀಯ ವಾಯುಸೇನೆಗೆ ಉಡುಗೊರೆಯಾಗಿ ನೀಡುವ ಮೂಲಕ ನನ್ನ ತಂದೆಯ ಕನಸು ಸಾಕಾರಗೊಳ್ಳುವಲ್ಲಿ ನಾನು ಸಹಾಯ ಮಾಡಿದಂತಾಗಿದೆ ಎಂದು ಹೇಳಿದರು. ವಿಮಾನಕ್ಕೆ ಚಿರಂಜೀವಿ ಸೈನಿಕನಾಗಿರುವ, ವಿಷ್ಣುವಿನ 6ನೇ ಅವತಾರವಾದ ಪರಶುರಾಮ ಎಂದು ಹೆಸರಿಡಲಾಗಿದೆ ಎಂದು ರಾಜೀವ್‌ ಚಂದ್ರಶೇಖರ್‌ ತಿಳಿಸಿದರು.

ಗುಜರಿ ಸೇರಿದ್ದ ಈ ವಿಮಾನವನ್ನು ಉಡುಗೊರೆಯನ್ನು ನೀಡುವ ಮೂಲಕ ಡಕೋಟವನ್ನು ಚಲಾಯಿಸಿದ ಎಲ್ಲ ವಾಯುಸೇನೆ ಸೈನಿಕರು ಮತ್ತವರ ಕುಟುಂಬದವರಿಗೆ ಸಮರ್ಪಿಸುತ್ತೇನೆ. ಡಕೋಟವು 1947 ರಿಂದ 1971ರವರೆಗೆ ದೇಶದ ಅತ್ಯಂತ ಮೂಲೆಗಳಲ್ಲೂ ಸೇವೆ ಸಲ್ಲಿಸಿದ ವಿಮಾನವಾಗಿದೆ ಎಂದು ನಿವೃತ್ತ ಏರ್‌ ಕಮಾಂಡರ್‌ ಎಂ.ಕೆ.ಚಂದ್ರಶೇಖರ್‌ ಭಾವುಕರಾಗಿ ನುಡಿದರು.