ನಿರ್ಮಾಪಕನ ಸಂಬಂಧಿ ಮೇಲೆ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ದುನಿಯಾ ವಿಜಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಕೊಲೆ ಬೆದರಿಕೆ ಆರೋಪದಡಿ ದುನಿಯಾ ವಿಜಿಯನ್ನು ಬಂಧಿಸಲಾಗಿದೆ. ಈಗಾಗಲೇ ಬಂಧಿಸಲಾಗಿರುವ ವಿಜಿ ವಿರುದ್ಧ ಐಪಿಸಿ 323, 504, 506, 509 ಅಡಿಯಲ್ಲಿ ಎಫ್'ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣಗಳಲ್ಲಿ ಆರೋಪಿಗೆ ಠಾಣೆಯಲ್ಲೇ  ಜಾಮೀನು ಸಿಗುವ ಸಾಧ್ಯತೆಗಳಿವೆ. ಇದರೊಂದಿಗೆ ನ್ಯಾಯಾಧೀಶರ ಎದುರೂ ದುನಿಯಾ ವಿಜಯ್​ರನ್ನು ಹಾಜರುಪಡಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಠಾಣೆ ಜಾಮೀನು ಕೊಡಬಹುದಾ ಅಥವಾ ಜಡ್ಜ್​ ಹಾಜರುಪಡಿಸಬೇಕಾ ಎಂಬುದು ತನಿಖಾಧಿಕಾರಿ ವಿವೇಚನೆಗೆ ಬಿಟ್ಟದ್ದು ಹಾಗಾಗಿ, ದುನಿಯಾ ವಿಜಯ್​ ಜೈಲಿಗೆ ಹೋಗುವ ಸಾಧ್ಯತೆ ಕಡಿಮೆ

ಬೆಂಗಳೂರು(ನ.15): ನಿರ್ಮಾಪಕನ ಸಂಬಂಧಿ ಮೇಲೆ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ದುನಿಯಾ ವಿಜಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಕೊಲೆ ಬೆದರಿಕೆ ಆರೋಪದಡಿ ದುನಿಯಾ ವಿಜಿಯನ್ನು ಬಂಧಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈಗಾಗಲೇ ಬಂಧಿಸಲಾಗಿರುವ ವಿಜಿ ವಿರುದ್ಧ ಐಪಿಸಿ 323, 504, 506, 509 ಅಡಿಯಲ್ಲಿ ಎಫ್'ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣಗಳಲ್ಲಿ ಆರೋಪಿಗೆ ಠಾಣೆಯಲ್ಲೇ ಜಾಮೀನು ಸಿಗುವ ಸಾಧ್ಯತೆಗಳಿವೆ. ಇದರೊಂದಿಗೆ ನ್ಯಾಯಾಧೀಶರ ಎದುರೂ ದುನಿಯಾ ವಿಜಯ್​ರನ್ನು ಹಾಜರುಪಡಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಠಾಣೆ ಜಾಮೀನು ಕೊಡಬಹುದಾ ಅಥವಾ ಜಡ್ಜ್​ ಹಾಜರುಪಡಿಸಬೇಕಾ ಎಂಬುದು ತನಿಖಾಧಿಕಾರಿ ವಿವೇಚನೆಗೆ ಬಿಟ್ಟದ್ದು ಹಾಗಾಗಿ, ದುನಿಯಾ ವಿಜಯ್​ ಜೈಲಿಗೆ ಹೋಗುವ ಸಾಧ್ಯತೆ ಕಡಿಮೆ

ಘಟನೆನಡೆದಿದ್ದುಹೇಗೆ?

ಮಾಸ್ತಿಗುಡಿ ನಿರ್ಮಾಪಕ ಸುಂದರ್​ ಗೌಡ ಅಣ್ಣ ಶಂಕರ್​ಗೌಡ 3 ತಿಂಗಳ ಹಿಂದೆ ಮಾನಸ ಎಂಬುವರನ್ನು ಮದುವೆಯಾಗಿದ್ದರು. ಫೇಸ್​​ಬುಕ್​​ನಲ್ಲಿ ಪರಿಚಯವಾಗಿ ಶಂಕರ್​ಗೌಡ-ಮಾನಸ ಮದುವೆಯಾಗಿದ್ದರು. ಮದುವೆಯಾದ ದಿನದಿಂದಲೂ ಮಾನಸಳಿಗೆ ಶಂಕರ್​ಗೌಡ ಕುಟುಂಬದವರು ಕಿರುಕುಳ ನೀಡುತ್ತಿದ್ದು, ಮನಸಾ ಭೇಟಿಗೆ ತಂದೆ ಜಯರಾಮ್​, ತಾಯಿ ಯಶೋಧಮ್ಮಗೆ ಅವಕಾಶ ನೀಡುತ್ತಿರಲಿಲ್ಲ. ಈ ಕುರಿತು ತಂದೆ ಜಯರಾಮ್​ ಜತೆ ಮಾನಸಾ ನೋವು ಹಂಚಿಕೊಂಡಿದ್ದಳು.

ಈ ಬಗ್ಗೆ ವಿಚಾರಿಸಲು ಇಂದು ಚೆನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದಲ್ಲಿರುವ ಶಂಕರ್​ಗೌಡ ನಿವಾಸಕ್ಕೆ ಜಯರಾಮ್ ತೆರಳಿದ್ದರು. ಸಂಧಾನಕ್ಕಾಗಿ ನಟ ದುನಿಯಾ ವಿಜಯ್​​ರನ್ನು ಕರೆಸಿಕೊಂಡ ಶಂಕರ್​​ಗೌಡ ಮಾನಸಾ ತಂದೆ ಜಯರಾಮ್​​ ಜತೆ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಜಯರಾಮ್​ ಮೇಲೆ ಹಲ್ಲೆ ನಡೆಸಿದ್ದ ದುನಿಯಾ ವಿಜಿ ಜಯರಾಮ್​ಗೆ ಕಪಾಳ ಮೋಕ್ಷ ಮಾಡಿ, ಎದೆಗೆ ಗುದ್ದಿದ್ದರು.

ಇದರಿಂದ ಅಸ್ವಸ್ಥಗೊಂಡಿದ್ದ ಜಯರಾಮ್​​ರನ್ನು ಗಾಂಧಿಬಜಾರ್​ ಬಳಿಯ ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆಯ ಬಳಿಕ ಜಯರಾಮ್ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು. ಆಸ್ಪತ್ರೆಗೆ ತೆರಳಿ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಅಸ್ವಸ್ಥ ಜಯರಾಮ್​ ಹೇಳಿಕೆ ಪಡೆದಿದ್ದರು.

ಆದರೆ ಮಾಧ್ಯಮಗಳು ಜಯರಾಮ್​ ಪ್ರತಿಕ್ರಿಯೆ ಪಡೆಯುತ್ತಿದ್ದಂತೆ ಮತ್ತೆ ವಿಜಿ ಶಂಕರ್​ಗೌಡ- ಮಾನಸಾ ರಾಜೀ ಸಂಧಾನಕ್ಕೆ ಮುಂದಾಗಿದ್ದು, ಮಾನಸ ದುನಿಯಾ ವಿಜಿ ಯಾವುದೇ ಹಲ್ಲೆ ನಡೆಸಿಲ್ಲ ಎಂದು ಶಂಕರ್ ಹಾಗೂ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಆದರೆ, ಜಯರಾಮ್​ ಪತ್ನಿ ಯಶೋಧ ಈ ರಾಜಿ ಸಂಧಾನ ತಳ್ಳಿ ಹಾಕಿದ್ದರು. ಹೀಗಾಗಿ ಶಂಕರ್​ಗೌಡ ನಿವಾಸಕ್ಕೆ ತೆರಳಿ ದುನಿಯಾ ವಿಜಯ್​ ವಿಚಾರಣೆ ನಡೆಸಿದ ಪೊಲೀಸರು ವಿಜಿಯನ್ನು ಬಂಧಿಸಿದ್ದಾರೆ.