ಬಿಜೆಪಿಯಿಂದ ನನಗೆ ಕೇಸರಿ ಬಣ್ಣ ಬಳಿಯುವ ಹುನ್ನಾರ: ತಲೈವಾ ಆರೋಪಕ್ಕೆ ಕಮಲ ತತ್ತರ!
'ಬಿಜೆಪಿ ನನಗೆ ಒತ್ತಾಯಪೂರ್ವಕವಾಗಿ ಕೇಸರಿ ಬಣ್ಣ ಬಳಿಯುತ್ತಿದೆ'| ಬಿಜೆಪಿ ವಿರುದ್ಧ ಸೂಪರ್ ಸ್ಟಾರ್ ರಜನಿಕಾಂತ್ ಗಂಭೀರ ಆರೋಪ| ಕವಿ ತಿರುವಳ್ಳುವರ್ ಪ್ರತಿಮೆಗೆ ಕೇಸರಿ ಶಾಲು ಹೊದಿಸಿದ ಪ್ರಕರಣ| ಬಿಜೆಪಿಯ ವಿವಾದಾತ್ಮಕ ಟ್ವಿಟ್'ಗೆ ದ್ರಾವಿಡ ಸಂಘಟನೆಗಳ ತೀವ್ರ ಆಕ್ರೋಶ| ತಿರುವಳ್ಳುವರ್ ಜೊತೆಗೆ ನನಗೂ ಕೇಸರಿ ಬಣ್ಣ ಬಳಿಯುವ ಹುನ್ನಾರ ಎಂದ ರಜನಿಕಾಂತ್| ಬಿಜೆಪ ಸೇರುವಂತೆ ತಮಗೆ ಯಾರೂ ಆಹ್ವಾನ ನೀಡಿಲ್ಲ ಎಂದು ಸ್ಪಷ್ಟಪಡಿಸಿದ ರಜನಿಕಾಂತ್|
ಚೆನ್ನೈ(ನ.08): ಬಿಜೆಪಿ ಉದ್ದೇಶಪೂರ್ವಕವಾಗಿ ತಮಗೆ ಕೇಸರಿ ಬಣ್ಣ ಬಳಿಯುವ ಹುನ್ನಾರ ನಡೆಸಿದ್ದು, ಅವರ ಉದ್ದೇಶ ಎಂದೂ ಈಡೇರುವುದಿಲ್ಲ ಎಂದು ಖ್ಯಾತ ನಟ, ಸೂಪರ್ ಸ್ಟಾರ್ ರಜನೀಕಾಂತ್ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿಗೆ ಸೇರ್ಪಡೆಯಾಗುವಂತೆ ತಮಗೆ ಯಾವುದೇ ಆಹ್ವಾನ ಬಂದಿಲ್ಲ ಎಂದು ಸ್ಪಷ್ಟಪಿಡಿಸಿರುವ ರಜನಿಕಾಂತ್, ಆ ಪಕ್ಷದ ಸೈದ್ದಾಂತಿಕ ನಿಲುವುಗಳಿಗೂ ತಮಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಗೆ ಬನ್ನಿ, ರಜನಿಗೆ ಅಮಿತ್ ಶಾ ಆಹ್ವಾನ
ತಮಿಳುನಾಡಿನ ಪ್ರಸಿದ್ಧ ಸಂತ ಕವಿ ತಿರುವಳ್ಳುವರ್ ಪ್ರತಿಮೆಯನ್ನು ಕೇಸರಿಕರಣಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ರಜನಿಕಾಂತ್, ತಿರುವಳ್ಳುವರ್ ಜೊತೆಗೆ ತಮ್ಮನ್ನು ಕೇಸರಿಕರಣಗೊಳಿಸುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.
ಬಿಜೆಪಿ ಮುಖಂಡ ರಾಧಾಕೃಷ್ಣನ್ ಜೊತೆಗಿನ ಭೇಟಿ ಕುರಿತಂತೆ ಪ್ರತಿಕ್ರಿಯೆ ನೀಡಿದ ರಜನಿಕಾಂತ್, ಭೇಟಿ ವೇಳೆ ರಾಧಾಕೃಷ್ಣನ್ ಬಿಜೆಪಿ ಸೇರುವಂತೆ ತಮಗೆ ಯಾವುದೇ ಆಹ್ವಾನ ನೀಡಿಲ್ಲ ಎಂದು ಹೇಳಿದರು.
ರಾಜಕೀಯಕ್ಕೆ ಎಂಟ್ರಿ ಕೊಡ್ತಾರಂತೆ ತಲೈವಾ ರಜನಿಕಾಂತ್!
ತತ್ವಜ್ಞಾನಿ ಹಾಗೂ ಖ್ಯಾತ ತಮಿಳು ಕವಿ ತಿರುವಳ್ಳುವರ್ ಕೇಸರಿ ಶಾಲು ಧರಿಸಿದ ಚಿತ್ರವನ್ನು ತಮಿಳುನಾಡು ಬಿಜೆಪಿ ಘಟಕ ಟ್ವೀಟ್ ಮಾಡಿತ್ತು. ಬಿಜೆಪಿಯ ಈ ಟ್ವಿಟ್ ದ್ರಾವಿಡ ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದು, ತಿರುವಳ್ಳುವರ್ ಬಿಳಿ ಬಣ್ಣದ ಶಾಲನ್ನು ಧರಿಸುತ್ತಿದ್ದರು ಎಂದು ಸ್ಪಷ್ಟಪಡಿಸಿವೆ.
ಬಿಜೆಪಿ ಕವಿ ತಿರುವಳ್ಳುವರ್ ಅವರನ್ನು ಕೇಸರಿಕರಣಗೊಳಿಸಲು ಪ್ರಯತ್ನಿಸುತ್ತಿದ್ದು, ಈ ಹುನ್ನಾರ ಯಶಸ್ವಿಯಾಗಲು ಬಿಡುವುದಿಲ್ಲ ಎಂದು ದ್ರಾವಡಿ ಸಂಘಟನೆಗಳು ಹರಿಹಾಯ್ದಿವೆ. ಈ ಮಧ್ಯೆ ರಜನಿಕಾಂತ್ ಕೂಡ ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ರಾಜೀನಾಮೆ ಬೇಡ! ರಾಹುಲ್ ಬೆನ್ನಿಗೆ ನಿಂತ ರಜನಿಕಾಂತ್